ಪಂಚಮಸಾಲಿ ಸಮುದಾಯದವರಿಗೆ ರಾಜಕೀಯವಾಗಿ ಅನ್ಯಾಯವಾಗಿದೆ. ಯತ್ನಾಳ ಅವರು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ದಿವಂಗತ ಅನಂತಕುಮಾರ್ ಅವರಂತೆಯೇ ಸೈಕಲ್ ತುಳಿದು ಪಕ್ಷ ಕಟ್ಟಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಈಗಲೂ ಕೇಂದ್ರದಲ್ಲಿ ಪ್ರಭಾವಿ ನಾಯಕರಾಗಿರಬೇಕಿತ್ತು. ಆದರೆ, ಅವರನ್ನು ತಾಲ್ಲೂಕು ಮಟ್ಟದ ನಾಯಕರನ್ನಾಗಿಸಿರುವುದು ಅತ್ಯಂತ ನೋವಿನ ಸಂಗತಿ ಎಂದು ಅವರು ಪತ್ರಿಕಾ ಹೇಳಿಕೆ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.