ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದಾವಣಗೆರೆ: ಮಾನವ ಕಲ್ಯಾಣಕ್ಕೆ ಬಸವಣ್ಣನ ಚಿಂತನೆ ಸ್ಫೂರ್ತಿ

Published 12 ಮೇ 2024, 16:20 IST
Last Updated 12 ಮೇ 2024, 16:20 IST
ಅಕ್ಷರ ಗಾತ್ರ

ದಾವಣಗೆರೆ: ‘ಬಸವಣ್ಣನವರ ಚಿಂತನೆ ಹಾಗೂ ವಚನಗಳು ಮಾನವ ಕಲ್ಯಾಣವನ್ನು ಬಯಸುವ ಅನೇಕರಿಗೆ ಸ್ಫೂರ್ತಿಯಾಗಿವೆ’ ಎಂದು ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಲ್.ಎಚ್. ಅರುಣ್‌ಕುಮಾರ್ ಅಭಿಪ್ರಾಯಪಟ್ಟರು.

ಕಾಯಕಯೋಗಿ ಬಸವ ಪರಿಸರ ಸಂರಕ್ಷಣಾ ವೇದಿಕೆ ಮತ್ತು ವಿನಾಯಕ ಭಜನಾ ಮಂಡಳಿಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಬಸವಣ್ಣ ಅವರು ಮಾನವತಾವಾದಿ ಮತ್ತು ಶ್ರೇಷ್ಠ ಚಿಂತಕರಾಗಿದ್ದರು. 12ನೇ ಶತಮಾನದಲ್ಲಿ ಅವರು ಆರಂಭಿಸಿದ ಅನುಭವ ಮಂಟಪ ವಿಶ್ವದ ಮೊದಲ ಸಂಸತ್ತಿನ ಪರಿಕಲ್ಪನೆ ಎಂದು ಕರೆಯಲಾಗುತ್ತದೆ. ಬಸವಣ್ಣನವರ ಆದರ್ಶಗಳ ತಳಹದಿಯಲ್ಲಿ ಬಸವ ಪರಿಸರ ವೇದಿಕೆಯು ಸಮಾಜಮುಖಿ ಮತ್ತು ಗ್ರಾಮಮುಖಿ ಕಾರ್ಯಗಳನ್ನು ಮಾಡುತ್ತಿದ್ದು, ಗ್ರಾಮೀಣ ಸೊಗಡಿನ ಆಚರಣೆಗಳು ಪರಿಸರ ಸಂರಕ್ಷಣೆ ಈ ಗ್ರಾಮದಲ್ಲಿ ಸತತವಾಗಿ ನಡೆಯುತ್ತಿರುವುದು ಮಾದರಿಯಾಗಿವೆ’ ಎಂದು ಶ್ಲಾಘಿಸಿದರು.

‘ಬಸವ ಪರಿಸರ ವೇದಿಕೆ ಇಡೀ ಗ್ರಾಮವನ್ನು ಹಸಿರು ತಾಣವನ್ನಾಗಿ ಮಾಡಿದ್ದು, ವೇದಿಕೆಯ ಕಾರ್ಯಕರ್ತರು ತಮ್ಮ ಬಿಡುವಿನ ವೇಳೆಯಲ್ಲಿ ಗ್ರಾಮೀಣ ಬದುಕಿನ ರೈತರು ಉಪಯೋಗಿಸುತ್ತಿದ್ದ ವಸ್ತುಗಳನ್ನೇ ಕಲಾತ್ಮಕವಾಗಿ ಗ್ರಾಮಗಳಲ್ಲಿ ಸ್ಥಾಪಿಸುವ ಮೂಲಕ ಗ್ರಾಮೀಣ ಭಾರತವನ್ನು ಪರಿಚಯಿಸಿದೆ’ ಎಂದು ಬಾನಪ್ಪ ತಿಳಿಸಿದರು.

ಶಿಕ್ಷಕ ಗುರುಸಿದ್ಧಸ್ವಾಮಿ ಮಾತನಾಡಿ, ‘ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ವಿಜ್ಞಾನ ಮತ್ತು ಪರಿಸರ ಸಂಯೋಗವಾದಾಗ ಮಾನವನ ಜನ್ಮ ಸಾರ್ಥಕವಾಗುತ್ತದೆ’ ಎಂದು ಹೇಳಿದರು.

ಪರಿಸರ ಸಂರಕ್ಷಣಾ ವೇದಿಕೆ ಅಧ್ಯಕ್ಷ ಎನ್.ಟಿ. ರುದ್ರಪ್ಪ ಮಾತನಾಡಿ, ‘ಯುವಕರು ಮೊಬೈಲ್ ಅನ್ನು ಬದಿಗೊತ್ತಿ ಗಿಡ ಮರಗಳನ್ನು ಬೆಳೆಸುವ ನಿಟ್ಟಿನಲ್ಲಿ ಸಾಗಬೇಕು’ ಎಂದು ಸಲಹೆ ನೀಡಿದರು.

ಸಿ.‍ಪಿ. ಮಲ್ಲಿಕಾರ್ಜುನ, ತಿಪ್ಪೇಶ್, ಹಾಲೇಶ್‌, ಡಿ.ಕರಿಬಸಣ್ಣ, ಸಿ.ಎಂ. ಅರುಣ್, ಕೇರ್ನಳ್ಳಿ ರಾಜು, ಮಹಾಂತೇಶ್‌, ಗೋಪಿನಾಥ್ ಇದ್ದರು. ಶಾಮಿಯಾನ ವೀರೇಶ್ ಅಧ್ಯಕ್ಷತೆ ವಹಿಸಿದ್ದರು. ರಂಗಣ್ಣ ವಂದಿಸಿದರು.

ಕಾರ್ಯಕ್ರಮಕ್ಕೂ ಮೊದಲು ಬಸವ ಪರಿಸರ ಸಂರಕ್ಷಣಾ ವೇದಿಕೆಯಿಂದ ಎತ್ತಿನ ಗಾಡಿಯಲ್ಲಿ ಬಸವಣ್ಣ ಅವರ ಭಾವಚಿತ್ರವನ್ನು ಭಜನೆಯ ಮೂಲಕ ಮೆರವಣಿಗೆ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT