‘ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭ ₹72 ಸಾವಿರ ಕೋಟಿ ರೈತರ ಸಾಲಮನ್ನಾ ಮಾಡಿದ್ದರು. ಬರಗಾಲದಿಂದಾಗಿ ಅಂತರ್ಜಲ ಮಟ್ಟ ಕುಸಿದಿದ್ದು, ಅಡಿಕೆ, ತೆಂಗು, ಬಾಳೆ ಬೆಳೆಗಾರರು, ಬೆಳೆ ಉಳಿಸಿಕೊಳ್ಳಲು ಭಗೀರಥ ಯತ್ನ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ರೈತರು ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿನ ಸಾಲನ್ನಾ ಮಾಡಬೇಕು. ಹಾಗೂ ಬರ ಪರಿಹಾರದ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು.