<p><strong>ಬಸವಾಪಟ್ಟಣ</strong>: ‘ಈ ಭಾಗದಲ್ಲಿ ಎರಡು ಮೂರು ದಿನಗಳಿಂದ ಬೀಳುತ್ತಿರುವ ಮಳೆ ಬಿತ್ತನೆಗೆ ಅನುಕೂಲವಾಗಿದ್ದು, ಕೃಷಿ ಕೇಂದ್ರದಲ್ಲಿ ಈಗ ವಿತರಿಸುತ್ತಿರುವ ಮೆಕ್ಕೆಜೋಳದ ಬೀಜಗಳನ್ನು ರೈತರು ಖರೀದಿಸಿ ಬಿತ್ತನೆಗೆ ತೊಡಗಬೇಕು’ ಎಂದು ಇಲ್ಲಿನ ಕೃಷಿ ಅಧಿಕಾರಿ ಎನ್.ಲತಾ ಹೇಳಿದರು.</p>.<p>ಬುಧವಾರ ರೈತರಿಗೆ ರಿಯಾಯಿತಿ ದರದ ಬಿತ್ತನೆ ಬೀಜಗಳನ್ನು ವಿತರಿಸಿ ಅವರು ಮಾತನಾಡಿದರು.</p>.<p>ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಕೆ.ಜಿ.ಗೆ ₹ 30, ಸಾಮಾನ್ಯವರ್ಗದ ರೈತರಿಗೆ ಕೆ.ಜಿ.ಗೆ ₹ 20ರಂತೆ ರಿಯಾಯಿತಿ ದರ ಇದ್ದು, ರೈತರು ಇದರ ಸದುಪಯೋಗ ಮಾಡಿಕೊಳ್ಳಬೇಕು. ಬಸವಾಪಟ್ಟಣ ರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯಲ್ಲಿ ಮೆಕ್ಕೆಜೋಳ, ಹೈಬ್ರೀಡ್ ಜೋಳ, ತೊಗರಿ, ಅವರೆ ಹೆಸರು ಸೇರಿ ಒಟ್ಟು 4,500 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಆಗಲಿದೆ ಎಂದು ಲತಾ ಹೇಳಿದರು.</p>.<p>ಸಹಾಯಕ ಕೃಷಿ ತಾಂತ್ರಿಕ ವ್ಯವಸ್ಥಾಪಕ ಬಿ.ಎಲ್.ಅವಿನಾಶ್ ಮಾತನಾಡಿ, ‘ಜೂನ್ 15ರ ಒಳಗೆ ಮೆಕ್ಕೆಜೋಳದ ಬಿತ್ತನೆ ಆದಲ್ಲಿ ಸಸಿಗಳ ಕಾಂಡಗಳು ಬಲಿತು ಲದ್ದಿಹುಳುಗಳ ಬಾಧೆಯನ್ನು ತಪ್ಪಿಸಬಹುದು. ಆದಷ್ಟು ಬೇಗ ರೈತರು ಬಿತ್ತನೆಗೆ ತೊಡಗಬೇಕು ಎಂದರು.</p>.<p>ಸುತ್ತಲಿನ ಗ್ರಾಮಗಳ ರೈತರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಾಪಟ್ಟಣ</strong>: ‘ಈ ಭಾಗದಲ್ಲಿ ಎರಡು ಮೂರು ದಿನಗಳಿಂದ ಬೀಳುತ್ತಿರುವ ಮಳೆ ಬಿತ್ತನೆಗೆ ಅನುಕೂಲವಾಗಿದ್ದು, ಕೃಷಿ ಕೇಂದ್ರದಲ್ಲಿ ಈಗ ವಿತರಿಸುತ್ತಿರುವ ಮೆಕ್ಕೆಜೋಳದ ಬೀಜಗಳನ್ನು ರೈತರು ಖರೀದಿಸಿ ಬಿತ್ತನೆಗೆ ತೊಡಗಬೇಕು’ ಎಂದು ಇಲ್ಲಿನ ಕೃಷಿ ಅಧಿಕಾರಿ ಎನ್.ಲತಾ ಹೇಳಿದರು.</p>.<p>ಬುಧವಾರ ರೈತರಿಗೆ ರಿಯಾಯಿತಿ ದರದ ಬಿತ್ತನೆ ಬೀಜಗಳನ್ನು ವಿತರಿಸಿ ಅವರು ಮಾತನಾಡಿದರು.</p>.<p>ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಕೆ.ಜಿ.ಗೆ ₹ 30, ಸಾಮಾನ್ಯವರ್ಗದ ರೈತರಿಗೆ ಕೆ.ಜಿ.ಗೆ ₹ 20ರಂತೆ ರಿಯಾಯಿತಿ ದರ ಇದ್ದು, ರೈತರು ಇದರ ಸದುಪಯೋಗ ಮಾಡಿಕೊಳ್ಳಬೇಕು. ಬಸವಾಪಟ್ಟಣ ರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯಲ್ಲಿ ಮೆಕ್ಕೆಜೋಳ, ಹೈಬ್ರೀಡ್ ಜೋಳ, ತೊಗರಿ, ಅವರೆ ಹೆಸರು ಸೇರಿ ಒಟ್ಟು 4,500 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಆಗಲಿದೆ ಎಂದು ಲತಾ ಹೇಳಿದರು.</p>.<p>ಸಹಾಯಕ ಕೃಷಿ ತಾಂತ್ರಿಕ ವ್ಯವಸ್ಥಾಪಕ ಬಿ.ಎಲ್.ಅವಿನಾಶ್ ಮಾತನಾಡಿ, ‘ಜೂನ್ 15ರ ಒಳಗೆ ಮೆಕ್ಕೆಜೋಳದ ಬಿತ್ತನೆ ಆದಲ್ಲಿ ಸಸಿಗಳ ಕಾಂಡಗಳು ಬಲಿತು ಲದ್ದಿಹುಳುಗಳ ಬಾಧೆಯನ್ನು ತಪ್ಪಿಸಬಹುದು. ಆದಷ್ಟು ಬೇಗ ರೈತರು ಬಿತ್ತನೆಗೆ ತೊಡಗಬೇಕು ಎಂದರು.</p>.<p>ಸುತ್ತಲಿನ ಗ್ರಾಮಗಳ ರೈತರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>