<p>ಬಸವಾಪಟ್ಟಣ: ಸೂಳೆಕೆರೆ ಅಚ್ಚುಕಟ್ಟು ಪ್ರದೇಶದ ಸುಮಾರು 300 ಹೆಕ್ಟೇರ್ ಪ್ರದೇಶದಲ್ಲಿ ಬೇಸಿಗೆ ಹಂಗಾಮಿನ ಭತ್ತದ ಕೊಯ್ಲು ಆರಂಭವಾಗಿದೆ. ಆದರೆ ಈ ಬಾರಿಯ ಬಿರುಬಿಸಿಲಿನಿಂದ ಇಳುವರಿ ಕಡಿಮೆಯಾಗಿದೆ ಎಂದು ರೈತರು ತಿಳಿಸಿದ್ದಾರೆ.</p>.<p>‘ಸಾಮಾನ್ಯವಾಗಿ ಬೇಸಿಗೆ ಹಂಗಾಮಿನ ಬೆಳೆಗೆ ರೋಗ ಮತ್ತು ಕೀಟಗಳ ಬಾಧೆ ಕಡಿಮೆ. ಎಕರೆಗೆ 30 ರಿಂದ 35 ಕ್ವಿಂಟಲ್ ಇಳುವರಿ ಬರುತ್ತಿತ್ತು. ಈ ವರ್ಷವೂ ಉತ್ತಮವಾದ ಇಳುವರಿ ನಿರೀಕ್ಷಿಸಿದ್ದೆವು. ಆದರೆ ಬಿಸಿಲಿನ ತೀವ್ರತೆಯಿಂದ ಈವರ್ಷದ ಬೇಸಿಗೆ ಹಂಗಾಮಿನಲ್ಲಿ ನಾವು ನಾಟಿ ಮಾಡಿದ ಆರ್.ಎನ್.ಆರ್ ತಳಿಯ ಭತ್ತ ಎಕೆರೆಗೆ 25 ರಿಂದ 26 ಕ್ವಿಂಟಲ್ ಇಳುವರಿ ಬಂದಿದೆ’ ಎಂದು ಚಿರಡೋಣಿಯ ರೈತ ಸಿ.ಎಂ.ರುದ್ರಯ್ಯ ಹೇಳಿದರು.</p>.<p>‘ಕಳೆದ ಮಳೆಗಾಲದಲ್ಲಿ ಉತ್ತಮ ಇಳುವರಿ ಬಂದಿತ್ತು. ದರವೂ ಕ್ವಿಂಟಲ್ಗೆ ₹3,000ವರೆಗೆ ಏರಿಕೆಯಾಗಿತ್ತು. ಆದರೆ ಬೇಸಿಗೆ ಬೆಳೆಯಲ್ಲಿ ಬೆಳೆದ ಭತ್ತಕ್ಕೆ ಕ್ವಿಂಟಲ್ಗೆ ₹2,500 ರಿಂದ ₹2,700 ದರ ಸಿಗುತ್ತಿದೆ. ಇತರ ಕಡೆಗಳಿಂದ ಭತ್ತದ ಆವಕ ಹೆಚ್ಚಿರುವುದರಿಂದ ವ್ಯಾಪಾರಿಗಳೂ ಸಹ ಹೆಚ್ಚಿನ ದರ ನೀಡಿ ಕೊಳ್ಳಲು ಮುಂದೆ ಬರುತ್ತಿಲ್ಲ. ಇದರಿಂದ ರೈತರಿಗೆ ಸಹಜವಾಗಿ ನಷ್ಟವುಂಟಾಗಿದೆ’ ಎಂದು ರೈತ ನಾಗೇಶ್ವರ ರಾವ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಸವಾಪಟ್ಟಣ: ಸೂಳೆಕೆರೆ ಅಚ್ಚುಕಟ್ಟು ಪ್ರದೇಶದ ಸುಮಾರು 300 ಹೆಕ್ಟೇರ್ ಪ್ರದೇಶದಲ್ಲಿ ಬೇಸಿಗೆ ಹಂಗಾಮಿನ ಭತ್ತದ ಕೊಯ್ಲು ಆರಂಭವಾಗಿದೆ. ಆದರೆ ಈ ಬಾರಿಯ ಬಿರುಬಿಸಿಲಿನಿಂದ ಇಳುವರಿ ಕಡಿಮೆಯಾಗಿದೆ ಎಂದು ರೈತರು ತಿಳಿಸಿದ್ದಾರೆ.</p>.<p>‘ಸಾಮಾನ್ಯವಾಗಿ ಬೇಸಿಗೆ ಹಂಗಾಮಿನ ಬೆಳೆಗೆ ರೋಗ ಮತ್ತು ಕೀಟಗಳ ಬಾಧೆ ಕಡಿಮೆ. ಎಕರೆಗೆ 30 ರಿಂದ 35 ಕ್ವಿಂಟಲ್ ಇಳುವರಿ ಬರುತ್ತಿತ್ತು. ಈ ವರ್ಷವೂ ಉತ್ತಮವಾದ ಇಳುವರಿ ನಿರೀಕ್ಷಿಸಿದ್ದೆವು. ಆದರೆ ಬಿಸಿಲಿನ ತೀವ್ರತೆಯಿಂದ ಈವರ್ಷದ ಬೇಸಿಗೆ ಹಂಗಾಮಿನಲ್ಲಿ ನಾವು ನಾಟಿ ಮಾಡಿದ ಆರ್.ಎನ್.ಆರ್ ತಳಿಯ ಭತ್ತ ಎಕೆರೆಗೆ 25 ರಿಂದ 26 ಕ್ವಿಂಟಲ್ ಇಳುವರಿ ಬಂದಿದೆ’ ಎಂದು ಚಿರಡೋಣಿಯ ರೈತ ಸಿ.ಎಂ.ರುದ್ರಯ್ಯ ಹೇಳಿದರು.</p>.<p>‘ಕಳೆದ ಮಳೆಗಾಲದಲ್ಲಿ ಉತ್ತಮ ಇಳುವರಿ ಬಂದಿತ್ತು. ದರವೂ ಕ್ವಿಂಟಲ್ಗೆ ₹3,000ವರೆಗೆ ಏರಿಕೆಯಾಗಿತ್ತು. ಆದರೆ ಬೇಸಿಗೆ ಬೆಳೆಯಲ್ಲಿ ಬೆಳೆದ ಭತ್ತಕ್ಕೆ ಕ್ವಿಂಟಲ್ಗೆ ₹2,500 ರಿಂದ ₹2,700 ದರ ಸಿಗುತ್ತಿದೆ. ಇತರ ಕಡೆಗಳಿಂದ ಭತ್ತದ ಆವಕ ಹೆಚ್ಚಿರುವುದರಿಂದ ವ್ಯಾಪಾರಿಗಳೂ ಸಹ ಹೆಚ್ಚಿನ ದರ ನೀಡಿ ಕೊಳ್ಳಲು ಮುಂದೆ ಬರುತ್ತಿಲ್ಲ. ಇದರಿಂದ ರೈತರಿಗೆ ಸಹಜವಾಗಿ ನಷ್ಟವುಂಟಾಗಿದೆ’ ಎಂದು ರೈತ ನಾಗೇಶ್ವರ ರಾವ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>