<p>ಬಸವಾಪಟ್ಟಣ: ಮನುಷ್ಯರೆಲ್ಲರೂ ಒಂದೇ ಎಂಬ ಹೃದಯ ವೈಶಾಲ್ಯತೆಯನ್ನು ಬೆಳೆಸಿಕೊಂಡು ಮಾನವ ಧರ್ಮವನ್ನು ರಕ್ಷಿಸಿ ಎಂದು ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮೀಜಿ ಹೇಳಿದರು.</p>.<p>ಸಮೀಪದ ಚಿರಡೋಣಿಯಲ್ಲಿ ನೂತನವಾಗಿ ನಿರ್ಮಿಸಿರುವ ವೀರಭದ್ರಸ್ವಾಮಿ ದೇಗುಲದ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಏರ್ಪಡಿಸಿದ್ದ ಜನಜಾಗೃತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.</p>.<p>ಮಾನವನ ಸ್ವಾರ್ಥ ಮತ್ತು ಸಂಕುಚಿತ ಧಾರ್ಮಿಕ ಭಾವನೆಯಿಂದ ಪ್ರಪಂಚ ತಲ್ಲಣಗೊಳ್ಳುತ್ತಿದೆ. ಮನುಕುಲದ ಉಳಿವಿಗಾಗಿ ನಾವೆಲ್ಲರೂ ಒಂದೇ ಎಂಬ ಭಾವನೆಯನ್ನು ಬೆಳೆಸಿಕೊಂಡರೆ ವಿಶ್ವದಲ್ಲಿ ಶಾಂತಿ ಸಾಧ್ಯ. ಎಲ್ಲಾ ಧರ್ಮಗಳೂ ಮಾನವನ ಶ್ರೇಯೋಭಿವೃದ್ಧಿಗೆ ಅಗತ್ಯವಾದ ತತ್ವಾದರ್ಶಗಳನ್ನು ನೀಡುರುವುದರಿಂದ ಎಲ್ಲಾ ಧರ್ಮಗಳನ್ನೂ ಸಮನಾಗಿ ನೋಡಬೇಕು ಎಂದರು.</p>.<p>ಚಿರಡೋಣಿ ಗ್ರಾಮದಲ್ಲಿ ಶಿವನ ಅವತಾರವಾದ ವೀರಭದ್ರಸ್ವಾಮಿಯ ದೇಗುಲ ನಿರ್ಮಾಣಕ್ಕೆ ಗ್ರಾಮಸ್ಥರ ಸಹಕಾರ ಪ್ರಶಂಸನೀಯ ಎಂದರು.</p>.<p>ಕಾರ್ಯಕ್ರಮಕ್ಕೂ ಮುನ್ನ ರಂಭಾಪುರಿ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ ಏರ್ಪಡಿಸಲಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-43-2143068935</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಸವಾಪಟ್ಟಣ: ಮನುಷ್ಯರೆಲ್ಲರೂ ಒಂದೇ ಎಂಬ ಹೃದಯ ವೈಶಾಲ್ಯತೆಯನ್ನು ಬೆಳೆಸಿಕೊಂಡು ಮಾನವ ಧರ್ಮವನ್ನು ರಕ್ಷಿಸಿ ಎಂದು ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮೀಜಿ ಹೇಳಿದರು.</p>.<p>ಸಮೀಪದ ಚಿರಡೋಣಿಯಲ್ಲಿ ನೂತನವಾಗಿ ನಿರ್ಮಿಸಿರುವ ವೀರಭದ್ರಸ್ವಾಮಿ ದೇಗುಲದ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಏರ್ಪಡಿಸಿದ್ದ ಜನಜಾಗೃತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.</p>.<p>ಮಾನವನ ಸ್ವಾರ್ಥ ಮತ್ತು ಸಂಕುಚಿತ ಧಾರ್ಮಿಕ ಭಾವನೆಯಿಂದ ಪ್ರಪಂಚ ತಲ್ಲಣಗೊಳ್ಳುತ್ತಿದೆ. ಮನುಕುಲದ ಉಳಿವಿಗಾಗಿ ನಾವೆಲ್ಲರೂ ಒಂದೇ ಎಂಬ ಭಾವನೆಯನ್ನು ಬೆಳೆಸಿಕೊಂಡರೆ ವಿಶ್ವದಲ್ಲಿ ಶಾಂತಿ ಸಾಧ್ಯ. ಎಲ್ಲಾ ಧರ್ಮಗಳೂ ಮಾನವನ ಶ್ರೇಯೋಭಿವೃದ್ಧಿಗೆ ಅಗತ್ಯವಾದ ತತ್ವಾದರ್ಶಗಳನ್ನು ನೀಡುರುವುದರಿಂದ ಎಲ್ಲಾ ಧರ್ಮಗಳನ್ನೂ ಸಮನಾಗಿ ನೋಡಬೇಕು ಎಂದರು.</p>.<p>ಚಿರಡೋಣಿ ಗ್ರಾಮದಲ್ಲಿ ಶಿವನ ಅವತಾರವಾದ ವೀರಭದ್ರಸ್ವಾಮಿಯ ದೇಗುಲ ನಿರ್ಮಾಣಕ್ಕೆ ಗ್ರಾಮಸ್ಥರ ಸಹಕಾರ ಪ್ರಶಂಸನೀಯ ಎಂದರು.</p>.<p>ಕಾರ್ಯಕ್ರಮಕ್ಕೂ ಮುನ್ನ ರಂಭಾಪುರಿ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ ಏರ್ಪಡಿಸಲಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-43-2143068935</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>