‘ಜಗದೀಶ ಶೆಟ್ಟರ್ ಸೇರ್ಪಡೆಯಿಂದ ನಷ್ಟವಿಲ್ಲ’
ದಾವಣಗೆರೆ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಬಿಜೆಪಿಗೆ ಸೇರ್ಪಡೆಯಾಗಿರುವುದರಿಂದ ನಮಗೇನು ನಷ್ಟವಿಲ್ಲ. ನಮ್ಮ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಸೇರ್ಪಡೆಯಾಗಿರಲಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು. ‘ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ಗೆ ಇರಬೇಕಾದ ಮತಗಳು ಇದ್ದೇ ಇರ್ತಾವೆ ಯಾವುದೇ ಸಮಸ್ಯೆ ಇಲ್ಲ. ಎಲ್ಲಾ ಸ್ಥಾನಮಾನಗಳನ್ನು ನೀಡಿದ್ದೆವು. ಏನು ಮಾಡುವುದು’ ಎಂದರು. ‘ಲೋಕಸಭೆ ಚುನಾವಣೆಗೆ ಟಿಕೆಟ್ ಅನ್ನು ಎಲ್ಲಿಯಾದರೂ ಕೊಡಲಿ ನಮಗೇನು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.