<p><strong>ದಾವಣಗೆರೆ</strong>: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಯಿಯವರು ಜಾತ್ಯತೀತ ಮುಖ್ಯಮಂತ್ರಿ ಎಂದುಕೊಂಡಿದ್ದೆವು. ಆದರೆ ಅವರೊಬ್ಬ ಕೋಮುವಾದಿ ಸಿಎಂ. ಅವರ ತಂದೆ ಒಳ್ಳೆಯ ಪ್ರಗತಿಪರ ಮುಖ್ಯಮಂತ್ರಿಯಾಗಿದ್ದರು’ ಎಂದು ನಟ ಚೇತನ್ ವಾಗ್ದಾಳಿ ನಡೆಸಿದರು.</p>.<p>‘ಮತಾಂತರ ನಿಷೇಧ ಕಾಯ್ದೆ ಸಂವಿಧಾನ ವಿರೋಧಿಯಾಗಿದ್ದು, ಜನರನ್ನು ಹೆದರಿಸಿ, ಬೆದರಿಸಿ ಕಾಯ್ದೆ ಜಾರಿಗೆ ತರುವುದು ತರವಲ್ಲ. ಬಲವಂತವಾಗಿ ಮತಾಂತರ ಮಾಡಿದರೆ ಅದಕ್ಕೆ ಬೇಕಾದರೆ ಕ್ರಮ ಕೈಗೊಳ್ಳಲಿ. ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಟ್ಟುಕೊಂಡು ತರಲು ಹೊರಟಿರುವ ಕಾಯ್ದೆ ಇದಾಗಿದೆ’ ಎಂದು ಮಾಧ್ಯಮದವರಿಗ ಪ್ರತಿಕ್ರಿಯಿಸಿದರು.</p>.<p>‘ಬಸವಣ್ಣನವರು ಅವರದೇ ಆದ ಸ್ವಂತ ಧರ್ಮ ಕಟ್ಟಿದರು. ಅಂಬೇಡ್ಕರ್ 4 ಲಕ್ಷ ಜನರೊಂದಿಗೆ ಬೌದ್ಧ ಧರ್ಮ ಸೇರಿದರು. ಇವೆಲ್ಲಾ ನಮ್ಮ ಅಡಿಪಾಯದಲ್ಲಿವೆ. ಜನರಿಗೆ ಅವರದೇ ಆದ ಧರ್ಮವನ್ನು ಆಯ್ಕೆ ಮಾಡಿಕೊಳ್ಳಲು ಸಂವಿಧಾನದಲ್ಲಿ ಅವಕಾಶವಿದೆ’ ಎಂದರು.</p>.<p>‘ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದನ್ನು ವಿರೋಧಿಸುವ ಸ್ವಾಮೀಜಿಗಳು ಬಸವಣ್ಣನವರ ತತ್ವದಡಿಯಲ್ಲಿ ಬದುಕುತ್ತಿದ್ದಾರೆಂದು ಹೇಳಲಾಗುವುದಿಲ್ಲ. ಮಕ್ಕಳ ಬಗ್ಗೆ ಕಾಳಜಿ ಇರುವವರು, ಸಮಸಮಾಜ ಬಯಸುವ ಸ್ವಾಮೀಜಿಗಳು ಮಾತ್ರ ಬಸವಣ್ಣನ ತತ್ವದಡಿ ಬದುಕುತ್ತಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.</p>.<p>‘ಅಪೌಷ್ಟಿಕತೆ ಮಕ್ಕಳನ್ನು ಕಾಡುತ್ತಿದ್ದು, ಮಕ್ಕಳಿಗೆ ಒಂದಲ್ಲ ಎರಡು ಮೊಟ್ಟೆಗಳನ್ನು ನೀಡಬೇಕು. ತಿನ್ನುವವರಿಗೆ ಮೊಟ್ಟೆ ನೀಡಿ, ಮೊಟ್ಟೆ ತಿನ್ನದ ಮಕ್ಕಳಿಗೆ ಹಾಲು, ಹಣ್ಣು ನೀಡಿ’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಯಿಯವರು ಜಾತ್ಯತೀತ ಮುಖ್ಯಮಂತ್ರಿ ಎಂದುಕೊಂಡಿದ್ದೆವು. ಆದರೆ ಅವರೊಬ್ಬ ಕೋಮುವಾದಿ ಸಿಎಂ. ಅವರ ತಂದೆ ಒಳ್ಳೆಯ ಪ್ರಗತಿಪರ ಮುಖ್ಯಮಂತ್ರಿಯಾಗಿದ್ದರು’ ಎಂದು ನಟ ಚೇತನ್ ವಾಗ್ದಾಳಿ ನಡೆಸಿದರು.</p>.<p>‘ಮತಾಂತರ ನಿಷೇಧ ಕಾಯ್ದೆ ಸಂವಿಧಾನ ವಿರೋಧಿಯಾಗಿದ್ದು, ಜನರನ್ನು ಹೆದರಿಸಿ, ಬೆದರಿಸಿ ಕಾಯ್ದೆ ಜಾರಿಗೆ ತರುವುದು ತರವಲ್ಲ. ಬಲವಂತವಾಗಿ ಮತಾಂತರ ಮಾಡಿದರೆ ಅದಕ್ಕೆ ಬೇಕಾದರೆ ಕ್ರಮ ಕೈಗೊಳ್ಳಲಿ. ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಟ್ಟುಕೊಂಡು ತರಲು ಹೊರಟಿರುವ ಕಾಯ್ದೆ ಇದಾಗಿದೆ’ ಎಂದು ಮಾಧ್ಯಮದವರಿಗ ಪ್ರತಿಕ್ರಿಯಿಸಿದರು.</p>.<p>‘ಬಸವಣ್ಣನವರು ಅವರದೇ ಆದ ಸ್ವಂತ ಧರ್ಮ ಕಟ್ಟಿದರು. ಅಂಬೇಡ್ಕರ್ 4 ಲಕ್ಷ ಜನರೊಂದಿಗೆ ಬೌದ್ಧ ಧರ್ಮ ಸೇರಿದರು. ಇವೆಲ್ಲಾ ನಮ್ಮ ಅಡಿಪಾಯದಲ್ಲಿವೆ. ಜನರಿಗೆ ಅವರದೇ ಆದ ಧರ್ಮವನ್ನು ಆಯ್ಕೆ ಮಾಡಿಕೊಳ್ಳಲು ಸಂವಿಧಾನದಲ್ಲಿ ಅವಕಾಶವಿದೆ’ ಎಂದರು.</p>.<p>‘ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದನ್ನು ವಿರೋಧಿಸುವ ಸ್ವಾಮೀಜಿಗಳು ಬಸವಣ್ಣನವರ ತತ್ವದಡಿಯಲ್ಲಿ ಬದುಕುತ್ತಿದ್ದಾರೆಂದು ಹೇಳಲಾಗುವುದಿಲ್ಲ. ಮಕ್ಕಳ ಬಗ್ಗೆ ಕಾಳಜಿ ಇರುವವರು, ಸಮಸಮಾಜ ಬಯಸುವ ಸ್ವಾಮೀಜಿಗಳು ಮಾತ್ರ ಬಸವಣ್ಣನ ತತ್ವದಡಿ ಬದುಕುತ್ತಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.</p>.<p>‘ಅಪೌಷ್ಟಿಕತೆ ಮಕ್ಕಳನ್ನು ಕಾಡುತ್ತಿದ್ದು, ಮಕ್ಕಳಿಗೆ ಒಂದಲ್ಲ ಎರಡು ಮೊಟ್ಟೆಗಳನ್ನು ನೀಡಬೇಕು. ತಿನ್ನುವವರಿಗೆ ಮೊಟ್ಟೆ ನೀಡಿ, ಮೊಟ್ಟೆ ತಿನ್ನದ ಮಕ್ಕಳಿಗೆ ಹಾಲು, ಹಣ್ಣು ನೀಡಿ’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>