<p><strong>ದಾವಣಗೆರೆ:</strong> ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಹಗುರವಾಗಿ ಮಾತನಾಡಿದ ಕೃಷಿ ಸಚಿವ ಬಿ.ಸಿ. ಪಾಟೀಲ್ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಸಿರುಸೇನೆಯ ಜಿಲ್ಲಾ ಸಮಿತಿ ಪದಾಧಿಕಾರಿಗಳು ನಗರದಜಯದೇವ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಬಿ.ಸಿ. ಪಾಟೀಲ್ ವಿಧಾನಸೌಧದಿಂದಲೇ ತೊಲಗಲಿ ಎಂದು ಘೋಷಣೆ ಕೂಗಿದರು. ಸಚಿವರ ಭಾವಚಿತ್ರವಿದ್ದ ಫ್ಲೆಕ್ಸ್ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಯೂರಿಯಾ ಗೊಬ್ಬರದ ಅಭಾವ ಹಾಗೂ ಕೃಷಿ ಮತ್ತು ತೋಟಗಾರಿಕೆ ವಿದ್ಯಾರ್ಥಿಗಳಿಗೆ ಬಿ.ಎಸ್ಸಿ ಅಗ್ರಿ ಪದವಿಯಲ್ಲಿ ಈ ಹಿಂದೆ ಕೃಷಿಕರ ಮಕ್ಕಳಿಗೆ ಇದ್ದ ತಲಾ ಶೇ 40ರ ಕೋಟಾ ತೆಗೆದುಹಾಕಿದ್ದನ್ನು ಕೋಡಿಹಳ್ಳಿ ಚಂದ್ರಶೇಖರ್ ಪ್ರಶ್ನಿಸಿದ್ದಕ್ಕೆ ಅವರನ್ನು ಸಚಿವರು ಅವಹೇಳನ ಮಾಡಿದ್ದು ಸರಿಯಲ್ಲ’ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ ತಿಳಿಸಿದರು.</p>.<p>‘ನಂಜುಂಡಸ್ವಾಮಿ, ಪುಟ್ಟಣ್ಣಯ್ಯ ಮೊದಲಾದವರ ಜತೆ ಗುರುತಿಸಿಕೊಂಡು ಹೋರಾಟ ಮಾಡಿ, ಯಾವುದೇ ಅಧಿಕಾರದಾಸೆ ಇಲ್ಲದ ಕೋಡಿಹಳ್ಳಿ ಅವರನ್ನು ಅವಹೇಳನ ಮಾಡಿದ್ದು ಸರಿಯಲ್ಲ. ಅವರು ಕ್ಷಮೆ ಕೇಳದಿದ್ದರೆ ಜಿಲ್ಲೆಗೆ ಪ್ರವೇಶಿಸುವ ಸಂದರ್ಭದಲ್ಲಿ ಕಪ್ಪು ಪಟ್ಟಿ ಪ್ರದರ್ಶಿಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಪೊಲೀಸ್ ಅಧಿಕಾರಿಯಾಗಿ, ನಂತರ ಪಕ್ಷದಿಂದ ಪಕ್ಷಕ್ಕೆ ಹಾರಿ ಪ್ರಜಾಪ್ರಭುತ್ವವನ್ನೇ ಕಗ್ಗೊಲೆ ಮಾಡಿದವರಿಗೆ ರೈತರ ಸಮಸ್ಯೆ ಅರ್ಥವಾಗುವುದಾದರೂ ಹೇಗೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿನ್ನಸಮುದ್ರ ಶೇಖರನಾಯ್ಕ ಪ್ರಶ್ನಿಸಿದರು.</p>.<p>ಪ್ರತಿಭಟನೆಯಲ್ಲಿ ಪದಾಧಿಕಾರಿಗಳಾದ ಹನುಮೇಶಿ, ಶತಕೋಟಿ ಬಸವರಾಜ್, ಮಲ್ಲಶೆಟ್ಟಿಹಳ್ಳಿ ಮಂಜುನಾಥ್, ಬಸವಾಪಟ್ಟಣ ಬಸವರಾಜ್, ಗುರುಸಿದ್ದಾಪುರ ಸಿದ್ದೇಶ್, ದಾಗಿನಕಟ್ಟೆ ಸಂತೋಷ್ಕುಮಾರ್, ಬುಳ್ಳಾಪುರ ಶಿವಣ್ಣ, ಕಲೀಂಸಾಬ್, ಕೃಷ್ಣಮೂರ್ತಿ, ದಾಗಿನಕಟ್ಟೆ ಬಸವರಾಜ್, ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಹಗುರವಾಗಿ ಮಾತನಾಡಿದ ಕೃಷಿ ಸಚಿವ ಬಿ.ಸಿ. ಪಾಟೀಲ್ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಸಿರುಸೇನೆಯ ಜಿಲ್ಲಾ ಸಮಿತಿ ಪದಾಧಿಕಾರಿಗಳು ನಗರದಜಯದೇವ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಬಿ.ಸಿ. ಪಾಟೀಲ್ ವಿಧಾನಸೌಧದಿಂದಲೇ ತೊಲಗಲಿ ಎಂದು ಘೋಷಣೆ ಕೂಗಿದರು. ಸಚಿವರ ಭಾವಚಿತ್ರವಿದ್ದ ಫ್ಲೆಕ್ಸ್ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಯೂರಿಯಾ ಗೊಬ್ಬರದ ಅಭಾವ ಹಾಗೂ ಕೃಷಿ ಮತ್ತು ತೋಟಗಾರಿಕೆ ವಿದ್ಯಾರ್ಥಿಗಳಿಗೆ ಬಿ.ಎಸ್ಸಿ ಅಗ್ರಿ ಪದವಿಯಲ್ಲಿ ಈ ಹಿಂದೆ ಕೃಷಿಕರ ಮಕ್ಕಳಿಗೆ ಇದ್ದ ತಲಾ ಶೇ 40ರ ಕೋಟಾ ತೆಗೆದುಹಾಕಿದ್ದನ್ನು ಕೋಡಿಹಳ್ಳಿ ಚಂದ್ರಶೇಖರ್ ಪ್ರಶ್ನಿಸಿದ್ದಕ್ಕೆ ಅವರನ್ನು ಸಚಿವರು ಅವಹೇಳನ ಮಾಡಿದ್ದು ಸರಿಯಲ್ಲ’ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ ತಿಳಿಸಿದರು.</p>.<p>‘ನಂಜುಂಡಸ್ವಾಮಿ, ಪುಟ್ಟಣ್ಣಯ್ಯ ಮೊದಲಾದವರ ಜತೆ ಗುರುತಿಸಿಕೊಂಡು ಹೋರಾಟ ಮಾಡಿ, ಯಾವುದೇ ಅಧಿಕಾರದಾಸೆ ಇಲ್ಲದ ಕೋಡಿಹಳ್ಳಿ ಅವರನ್ನು ಅವಹೇಳನ ಮಾಡಿದ್ದು ಸರಿಯಲ್ಲ. ಅವರು ಕ್ಷಮೆ ಕೇಳದಿದ್ದರೆ ಜಿಲ್ಲೆಗೆ ಪ್ರವೇಶಿಸುವ ಸಂದರ್ಭದಲ್ಲಿ ಕಪ್ಪು ಪಟ್ಟಿ ಪ್ರದರ್ಶಿಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಪೊಲೀಸ್ ಅಧಿಕಾರಿಯಾಗಿ, ನಂತರ ಪಕ್ಷದಿಂದ ಪಕ್ಷಕ್ಕೆ ಹಾರಿ ಪ್ರಜಾಪ್ರಭುತ್ವವನ್ನೇ ಕಗ್ಗೊಲೆ ಮಾಡಿದವರಿಗೆ ರೈತರ ಸಮಸ್ಯೆ ಅರ್ಥವಾಗುವುದಾದರೂ ಹೇಗೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿನ್ನಸಮುದ್ರ ಶೇಖರನಾಯ್ಕ ಪ್ರಶ್ನಿಸಿದರು.</p>.<p>ಪ್ರತಿಭಟನೆಯಲ್ಲಿ ಪದಾಧಿಕಾರಿಗಳಾದ ಹನುಮೇಶಿ, ಶತಕೋಟಿ ಬಸವರಾಜ್, ಮಲ್ಲಶೆಟ್ಟಿಹಳ್ಳಿ ಮಂಜುನಾಥ್, ಬಸವಾಪಟ್ಟಣ ಬಸವರಾಜ್, ಗುರುಸಿದ್ದಾಪುರ ಸಿದ್ದೇಶ್, ದಾಗಿನಕಟ್ಟೆ ಸಂತೋಷ್ಕುಮಾರ್, ಬುಳ್ಳಾಪುರ ಶಿವಣ್ಣ, ಕಲೀಂಸಾಬ್, ಕೃಷ್ಣಮೂರ್ತಿ, ದಾಗಿನಕಟ್ಟೆ ಬಸವರಾಜ್, ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>