ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಪನಹಳ್ಳಿ ಬಳಿ ನೀಲಗುಂದದಲ್ಲಿ ಕರಡಿ ಪ್ರತ್ಯಕ್ಷ

Last Updated 21 ಅಕ್ಟೋಬರ್ 2021, 4:59 IST
ಅಕ್ಷರ ಗಾತ್ರ

ಹರಪನಹಳ್ಳಿ: ತಾಲ್ಲೂಕಿನ ನೀಲಗುಂದ ಗ್ರಾಮದ ರಾಷ್ಟ್ರೀಯ ಸ್ಮಾರಕ ಭೀಮೇಶ್ವರ ದೇವಸ್ಥಾನದ ಬಳಿ ಕರಡಿ ಪ್ರತ್ಯಕ್ಷವಾಗಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ಗ್ರಾಮದಿಂದ ಮಜ್ಜಿಗೆರೆ ಗ್ರಾಮಕ್ಕೆ ತೆರಳುವ ರಸ್ತೆಯ ಪ್ರತ್ಯಕ್ಷವಾಗುವ ಕರಡಿಯು, ತಿರುವಿನಲ್ಲಿ ಓಡುತ್ತದೆ. ಬೈಕ್ ಸವಾರಿ ಮಾಡಿಕೊಂಡು ಹೋಗುತ್ತಿದ್ದ ಕುರಿಗಾಯಿ ಯುವಕರು ಕರಡಿಯನ್ನು ಹಿಂಬಾಲಿಸಿ ಮೊಬೈಲ್‌ನಲ್ಲಿ ವಿಡಿಯೊ ಚಿತ್ರೀಕರಿಸಿದ್ದಾರೆ.

ಆ ಮಾರ್ಗದಲ್ಲಿ ಓಡಾಡುವ ರೈತರು, ಕೂಲಿ ಕಾರ್ಮಿಕರು ಜಾಗೃತೆಯಿಂದ ಇರುವಂತೆ ಮನವಿ ಮಾಡಿದ್ದಾರೆ. ಮೊಬೈಲ್‌ನಲ್ಲಿ ವಿಡಿಯೊ ಸೆರೆ ಹಿಡಿದಿರುವವರು ಯಾರೆಂಬುದು ತಿಳಿದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT