ಸೋಮವಾರ, ಮಾರ್ಚ್ 20, 2023
30 °C

ಆಪತ್‌ಕಾಲದ ಪರಿಹಾರ ನೀಡಲು ಬೀಡಿ ಕಾರ್ಮಿಕರ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಕೊರೊನಾ ಸೋಂಕು ಮತ್ತು ಲಾಕ್‌ಡೌನ್‌ನಿಂದಾಗಿ ಬೀಡಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೀಡಿ ಕಾರ್ಮಿಕರಿಗೆ ಆಪತ್‌ಕಾಲದ ಪರಿಹಾರ ನೀಡಬೇಕು ಎಂದು ನೆರಳು ಬೀಡಿ ಕಾರ್ಮಿಕರ ಯೂನಿಯನ್‌ ನೇತೃತ್ವದಲ್ಲಿ ಮಂಗಳವಾರ ಸಹಾಯಕ ಕಾರ್ಮಿಕ ಆಯುಕ್ತರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಆಪತ್‌ಕಾಲದ ಪರಿಹಾರವಾಗಿ ₹ 10 ಸಾವಿರವನ್ನು ನೇರವಾಗಿ ಕಾರ್ಮಿಕ ಮಹಿಳೆಯರ ಖಾತೆಗೆ ಹಾಕಬೇಕು. ಸರ್ಕಾರ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಬೇಕು. ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ, ಗೋಧಿ ಜೊತೆಗೆ ಬೇಳೆಕಾಳು, ಅಡುಗೆಎಣ್ಣೆ ಮುಂತಾದ ಅಗತ್ಯ ಸಾಮಗ್ರಿ ನೀಡಬೇಕು. ಬೀಡಿ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಬೇಕು. ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಒತ್ತಾಯಿಸಲಾಯಿತು.

ಯೂನಿಯನ್‌ ಅಧ್ಯಕ್ಷೆ ಜಬೀನಾ ಖಾನಂ, ಪ್ರಧಾನ ಕಾರ್ಯದರ್ಶಿ ಕರಿಬಸಪ್ಪ ಎಂ., ಸದಸ್ಯರಾದ ಹಸೀನ ಬಾನು, ಶಾಹಿನ ಬಾನು, ಶಾಹಿನ, ರಾಷಿದ ಬಿ., ನಸೀಮ ಬಾನು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.