‘ಹಿರಿಯೂರು ರೆಡ್ಕ್ರಾಸ್ ಸಂಸ್ಥೆ ಕೋವಿಡ್ ಸಮಯದಲ್ಲಿ ಸಾರ್ವಜನಿಕರ ಸೇವೆಯಲ್ಲಿ ತೊಡಗಿಸಿಕೊಂಡಿದೆ. ಕೊರೊನಾ ಸೋಂಕಿತರಿಗೆ ಸಹಾಯಹಸ್ತ ಚಾಚಿದ್ದು, ಕೊರೊನಾ ಜಾಗೃತಿ ಸಭೆಗಳನ್ನು ಆಯೋಜಿಸಿದ್ದು ಸೇರಿ ಹತ್ತಾರು ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಹನ್ನೊಂದು ವರ್ಷಗಳಲ್ಲಿ ಒಂಬತ್ತು ಬಾರಿ ‘ಅತ್ಯುತ್ತಮ ಶಾಖೆ’ ಪ್ರಶಸ್ತಿ, ಒಮ್ಮೆ ತನಗೆ ವೈಯಕ್ತಿಕ ಪ್ರಶಸ್ತಿ ದೊರೆತಿದ್ದು, ಒಟ್ಟಾರೆ ಹತ್ತು ಪ್ರಶಸ್ತಿಗಳನ್ನು ನಮ್ಮ ಸಂಸ್ಥೆ ಮುಡಿಗೇರಿಸಿಕೊಂಡಿದೆ’ ಎಂದು ಸಂಸ್ಥೆಯ ಚೇರ್ಮನ್ ಎಚ್.ಎಸ್. ಸುಂದರ್ರಾಜ್ ಸುದ್ದಿಗಾರರಿಗೆ ತಿಳಿಸಿದರು.