<p><strong>ಧರ್ಮಪುರ:</strong> ತಾಲ್ಲೂಕಿನ ಗಡಿ ಹೋಬಳಿ ಕೇಂದ್ರವಾಗಿರುವ ಧರ್ಮಪುರ ಸುತ್ತಮುತ್ತಲಿನ ಸಂಪರ್ಕ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿದ್ದು, ಪ್ರಯಾಣಿಕರು ಪರದಾಡುವ ಸ್ಥಿತಿ ಬಂದಿದೆ.</p>.<p>ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿರುವ ಖಂಡೇನಹಳ್ಳಿ, ಹಲಗಲದ್ದಿ, ಮದ್ದಿಹಳ್ಳಿ, ಹೊಸಕೆರೆ, ಬೇತೂರು, ಬೇತೂರು ಪಾಳ್ಯ, ಖಂಡೇನಹಳ್ಳಿ ಪಾಳ್ಯ ಹಾಗೂ ಅರಳೀಕೆರೆ ಸಂಪರ್ಕ ರಸ್ತೆಗಳಲ್ಲಿ ಆಳವಾದ ಗುಂಡಿಗಳು ನಿರ್ಮಾಣವಾಗಿವೆ. ರಸ್ತೆಗಳು ದುರಸ್ತಿ ಕಾಣದ್ದರಿಂದ ರಾತ್ರಿ ವೇಳೆ ಗುಂಡಿಗಳಿಗೆ ಬಿದ್ದು ಜನರು ಕೈಕಾಲು ಮುರಿದುಕೊಂಡಿದ್ದಾರೆ.</p>.<p>ಬೇತೂರಿನಿಂದ ಚಳ್ಳಕೆರೆ ಗಡಿವರೆಗೂ ಇರುವ ರಸ್ತೆಯ ಸ್ಥಿತಿ ತೀರಾ ಗಂಭೀರವಾಗಿದೆ. ಬಸ್, ಕಾರು, ಲಾರಿ, ಟ್ರ್ಯಾಕ್ಟರ್, ದ್ವಿಚಕ್ರ ವಾಹನಗಳ ಸಂಚಾರ ತ್ರಾಸದಾಯಕವಾಗಿದ್ದು, ಪ್ರಯಾಣಿಕರು ನಿತ್ಯ ಶಪಿಸುತ್ತಾ ಇಲ್ಲಿ ಓಡಾಡುತ್ತಿದ್ದಾರೆ. </p>.<p>‘ಗ್ಯಾರಂಟಿ ಯೋಜನೆಗಳ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಗ್ರಾಮೀಣ ಜನರ ಆಶೋತ್ತರಗಳನ್ನು ಮರೆತಿದೆ. ಅಭಿವೃದ್ಧಿಯಂತೂ ಮರೀಚಿಕೆಯಾಗಿದೆ. ಕನಿಷ್ಟ ಪಕ್ಷ ಗ್ರಾಮೀಣ ಸಂಪರ್ಕ ರಸ್ತೆಗಳ ಗುಂಡಿಯನ್ನಾದರೂ ಮುಚ್ಚಲಿ’ ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಅಭಿನಂದನ್ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧರ್ಮಪುರ:</strong> ತಾಲ್ಲೂಕಿನ ಗಡಿ ಹೋಬಳಿ ಕೇಂದ್ರವಾಗಿರುವ ಧರ್ಮಪುರ ಸುತ್ತಮುತ್ತಲಿನ ಸಂಪರ್ಕ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿದ್ದು, ಪ್ರಯಾಣಿಕರು ಪರದಾಡುವ ಸ್ಥಿತಿ ಬಂದಿದೆ.</p>.<p>ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿರುವ ಖಂಡೇನಹಳ್ಳಿ, ಹಲಗಲದ್ದಿ, ಮದ್ದಿಹಳ್ಳಿ, ಹೊಸಕೆರೆ, ಬೇತೂರು, ಬೇತೂರು ಪಾಳ್ಯ, ಖಂಡೇನಹಳ್ಳಿ ಪಾಳ್ಯ ಹಾಗೂ ಅರಳೀಕೆರೆ ಸಂಪರ್ಕ ರಸ್ತೆಗಳಲ್ಲಿ ಆಳವಾದ ಗುಂಡಿಗಳು ನಿರ್ಮಾಣವಾಗಿವೆ. ರಸ್ತೆಗಳು ದುರಸ್ತಿ ಕಾಣದ್ದರಿಂದ ರಾತ್ರಿ ವೇಳೆ ಗುಂಡಿಗಳಿಗೆ ಬಿದ್ದು ಜನರು ಕೈಕಾಲು ಮುರಿದುಕೊಂಡಿದ್ದಾರೆ.</p>.<p>ಬೇತೂರಿನಿಂದ ಚಳ್ಳಕೆರೆ ಗಡಿವರೆಗೂ ಇರುವ ರಸ್ತೆಯ ಸ್ಥಿತಿ ತೀರಾ ಗಂಭೀರವಾಗಿದೆ. ಬಸ್, ಕಾರು, ಲಾರಿ, ಟ್ರ್ಯಾಕ್ಟರ್, ದ್ವಿಚಕ್ರ ವಾಹನಗಳ ಸಂಚಾರ ತ್ರಾಸದಾಯಕವಾಗಿದ್ದು, ಪ್ರಯಾಣಿಕರು ನಿತ್ಯ ಶಪಿಸುತ್ತಾ ಇಲ್ಲಿ ಓಡಾಡುತ್ತಿದ್ದಾರೆ. </p>.<p>‘ಗ್ಯಾರಂಟಿ ಯೋಜನೆಗಳ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಗ್ರಾಮೀಣ ಜನರ ಆಶೋತ್ತರಗಳನ್ನು ಮರೆತಿದೆ. ಅಭಿವೃದ್ಧಿಯಂತೂ ಮರೀಚಿಕೆಯಾಗಿದೆ. ಕನಿಷ್ಟ ಪಕ್ಷ ಗ್ರಾಮೀಣ ಸಂಪರ್ಕ ರಸ್ತೆಗಳ ಗುಂಡಿಯನ್ನಾದರೂ ಮುಚ್ಚಲಿ’ ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಅಭಿನಂದನ್ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>