<p><strong>ದಾವಣಗೆರೆ</strong>: ಭದ್ರಾ ಬಲದಂಡೆ ನಾಲೆ ಸೀಳಿ ನಡೆಸುತ್ತಿರುವ ಕಾಮಗಾರಿಯನ್ನು ವಿರೋಧಿಸಿ ಜಿಲ್ಲಾ ರೈತ ಒಕ್ಕೂಟದ ನೇತೃತ್ವದಲ್ಲಿ ಜುಲೈ 14ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಿವಾಸಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.</p>.<p>‘ರಾಜ್ಯದ ಕಾಂಗ್ರೆಸ್ ಸರ್ಕಾರ ಭದ್ರಾ ಬಲದಂಡೆ ನಾಲೆ ಸೀಳಿ ರೈತರಿಗೆ ಮರಣಶಾಸನ ಬರೆಯಲು ಹೊರಟಿದೆ. ನಮ್ಮ ಭಾಗದ ರೈತರಿಗೆ ಅನ್ಯಾಯ ಮಾಡಲು ಹೊರಟಿದೆ. ಈಗಾಗಲೇ ಹಲವು ಹಂತದ ಹೋರಾಟಗಳನ್ನು ಮಾಡಿದರೂ, ಸರ್ಕಾರ ಎಚ್ಚೆತ್ತುಕೊಂಡಿಲ್ಲ’ ಎಂದು ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಸರ್ಕಾರ ಹೇಳುತ್ತಿದ್ದರೂ, ರೈತರ ಕಣ್ಣಿಗೆ ಮಣ್ಣೆರಚಿ ಪೊಲೀಸ್ ಭದ್ರತೆಯಲ್ಲಿ ಹಗಲು –ರಾತ್ರಿ ಕಾಮಗಾರಿ ನಡೆಸಲಾಗುತ್ತಿದೆ. ಇದು ಪ್ರಜಾತಂತ್ರದ ಕಗ್ಗೊಲೆ ಅಲ್ಲವಾ’ ಎಂದು ಪ್ರಶ್ನಿಸಿದರು.</p>.<p>‘ಭದ್ರಾ ಬಲದಂಡೆ ಅಚ್ಚುಕಟ್ಟು ಪ್ರದೇಶದ ರೈತರಿಗಾಗಿ ಹೋರಾಟ ನಡೆಸಲಾಗುತ್ತಿದೆಯೋ ಹೊರತು, ಸ್ವಾರ್ಥಕ್ಕಾಗಿ ಅಲ್ಲ. ಪ್ರತೀ ವರ್ಷ ಜುಲೈ 10ಕ್ಕೆ ನಾಲೆಗೆ ನೀರು ಬಿಡಲಾಗುತ್ತದೆ. ಆದರೆ, ಈ ವರ್ಷ ಇನ್ನೂ ಬಿಟ್ಟಿಲ್ಲ. ವರುಣನ ಕೃಪೆಯಿಂದ ಜಲಾಶಯದಲ್ಲಿ 174 ಅಡಿ ನೀರು ಸಂಗ್ರಹವಾಗಿದೆ. ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಭದ್ರಾ ಬಲದಂಡೆ ನಾಲೆ ಸೀಳಿ ನಡೆಸುತ್ತಿರುವ ಕಾಮಗಾರಿಯನ್ನು ವಿರೋಧಿಸಿ ಜಿಲ್ಲಾ ರೈತ ಒಕ್ಕೂಟದ ನೇತೃತ್ವದಲ್ಲಿ ಜುಲೈ 14ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಿವಾಸಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.</p>.<p>‘ರಾಜ್ಯದ ಕಾಂಗ್ರೆಸ್ ಸರ್ಕಾರ ಭದ್ರಾ ಬಲದಂಡೆ ನಾಲೆ ಸೀಳಿ ರೈತರಿಗೆ ಮರಣಶಾಸನ ಬರೆಯಲು ಹೊರಟಿದೆ. ನಮ್ಮ ಭಾಗದ ರೈತರಿಗೆ ಅನ್ಯಾಯ ಮಾಡಲು ಹೊರಟಿದೆ. ಈಗಾಗಲೇ ಹಲವು ಹಂತದ ಹೋರಾಟಗಳನ್ನು ಮಾಡಿದರೂ, ಸರ್ಕಾರ ಎಚ್ಚೆತ್ತುಕೊಂಡಿಲ್ಲ’ ಎಂದು ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಸರ್ಕಾರ ಹೇಳುತ್ತಿದ್ದರೂ, ರೈತರ ಕಣ್ಣಿಗೆ ಮಣ್ಣೆರಚಿ ಪೊಲೀಸ್ ಭದ್ರತೆಯಲ್ಲಿ ಹಗಲು –ರಾತ್ರಿ ಕಾಮಗಾರಿ ನಡೆಸಲಾಗುತ್ತಿದೆ. ಇದು ಪ್ರಜಾತಂತ್ರದ ಕಗ್ಗೊಲೆ ಅಲ್ಲವಾ’ ಎಂದು ಪ್ರಶ್ನಿಸಿದರು.</p>.<p>‘ಭದ್ರಾ ಬಲದಂಡೆ ಅಚ್ಚುಕಟ್ಟು ಪ್ರದೇಶದ ರೈತರಿಗಾಗಿ ಹೋರಾಟ ನಡೆಸಲಾಗುತ್ತಿದೆಯೋ ಹೊರತು, ಸ್ವಾರ್ಥಕ್ಕಾಗಿ ಅಲ್ಲ. ಪ್ರತೀ ವರ್ಷ ಜುಲೈ 10ಕ್ಕೆ ನಾಲೆಗೆ ನೀರು ಬಿಡಲಾಗುತ್ತದೆ. ಆದರೆ, ಈ ವರ್ಷ ಇನ್ನೂ ಬಿಟ್ಟಿಲ್ಲ. ವರುಣನ ಕೃಪೆಯಿಂದ ಜಲಾಶಯದಲ್ಲಿ 174 ಅಡಿ ನೀರು ಸಂಗ್ರಹವಾಗಿದೆ. ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>