<p><strong>ದಾವಣಗೆರೆ</strong>: ‘ಕರ್ನಾಟಕ ನೀರಾವರಿ ನಿಗಮದ ಭಾಗವಾಗಿರುವ ಭದ್ರಾ ಜಲಾಶಯವನ್ನು ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಸೇರಿಸುವ ಮೂಲಕ ಭದ್ರಾ ಜಲಾಶಯದ ನೀರನ್ನು ಅವಲಂಬಿಸಿರುವ ಜಿಲ್ಲೆಗಳ ಪಾಲಿಗೆ ಮರಣ ಶಾಸನ ಬರೆಯಲು ರಾಜ್ಯ ಸರ್ಕಾರ ಮುಂದಾಗಿದೆ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು. </p>.<p>‘ಭದ್ರಾ ಜಲಾಶಯಕ್ಕೆ ಅಚ್ಚುಕಟ್ಟು ಪ್ರದೇಶದ ರೈತರೇ ಮಾಲೀಕರು ಹೊರತು ರಾಜ್ಯ ಸರ್ಕಾರವಲ್ಲ. ಭದ್ರಾ ಜಲಾಶಯ ಮಧ್ಯ ಕರ್ನಾಟಕದ ರೈತರ ಜೀವನಾಡಿಯಾಗಿದೆ. ಇದನ್ನು ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಹಸ್ತಾಂತರಿಸುವ ಕೆಲಸದಿಂದ ಸರ್ಕಾರ ಹಿಂದೆ ಸರಿಯಬೇಕು’ ಎಂದು ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. </p>.<p>‘ಕಾಂಗ್ರೆಸ್ ಸರ್ಕಾರ ರೈತರ ಹಿತಾಸಕ್ತಿ ಕಾಪಾಡುತ್ತಿಲ್ಲ. ರೈತರ ಅಭಿಪ್ರಾಯ ಪಡೆಯದೇ ಕರ್ನಾಟಕ ನೀರಾವರಿ ನಿಗಮ ಅಧೀನದ ಭದ್ರಾ ಜಲಾಶಯವನ್ನು ಬೇರ್ಪಡಿಸುವ ದುಸ್ಸಾಹಸಕ್ಕೆ ಕಾಂಗ್ರೆಸ್ ಸರ್ಕಾರ ಕೈಹಾಕಿದೆ’ ಎಂದು ದೂರಿದರು. </p>.<p>‘ಬಳ್ಳಾರಿಯಲ್ಲಿ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಹಾಗೂ ಆ ಪಕ್ಷದ ಮುಖಂಡರು ನಡೆಸಿದ ದೌರ್ಜನ್ಯ ಖಂಡನೀಯವಾದುದು. ಶಾಸಕ ಭರತ್ ರೆಡ್ಡಿಯನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್. ರಾಜಶೇಖರ್ ಒತ್ತಾಯಿಸಿದರು. </p>.<p>‘ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಕೆಲಸ ಮಾಡಬೇಕಾಗಿದ್ದ ಬಳ್ಳಾರಿ ಶಾಸಕ ಹಿಟ್ಲರ್ ತರಹ ಆಡಳಿತ ನಡೆಸುತ್ತಿರುವುದು ಖಂಡನೀಯ. ಇದು ಪ್ರಜಾಪ್ರಭುತ್ವಕ್ಕೂ ಮಾರಕವಾದ ಬೆಳವಣಿಗೆಯಾಗಿದೆ’ ಎಂದರು. </p>.<p>ಮಾಜಿ ಶಾಸಕ ಎಂ.ಬಸವರಾಜ ನಾಯ್ಕ, ಮುಖಂಡರಾದ ಲೋಕಿಕೆರೆ ನಾಗರಾಜ, ಬಿ.ಎಂ.ಸತೀಶ್ ಕೊಳೇನಹಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧನಂಜಯ ಕಡ್ಲೇಬಾಳು, ಎನ್.ಎಚ್. ಹಾಲೇಶ ನಾಯ್ಕ, ಪಂಜು ಪೈಲ್ವಾನ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ‘ಕರ್ನಾಟಕ ನೀರಾವರಿ ನಿಗಮದ ಭಾಗವಾಗಿರುವ ಭದ್ರಾ ಜಲಾಶಯವನ್ನು ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಸೇರಿಸುವ ಮೂಲಕ ಭದ್ರಾ ಜಲಾಶಯದ ನೀರನ್ನು ಅವಲಂಬಿಸಿರುವ ಜಿಲ್ಲೆಗಳ ಪಾಲಿಗೆ ಮರಣ ಶಾಸನ ಬರೆಯಲು ರಾಜ್ಯ ಸರ್ಕಾರ ಮುಂದಾಗಿದೆ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು. </p>.<p>‘ಭದ್ರಾ ಜಲಾಶಯಕ್ಕೆ ಅಚ್ಚುಕಟ್ಟು ಪ್ರದೇಶದ ರೈತರೇ ಮಾಲೀಕರು ಹೊರತು ರಾಜ್ಯ ಸರ್ಕಾರವಲ್ಲ. ಭದ್ರಾ ಜಲಾಶಯ ಮಧ್ಯ ಕರ್ನಾಟಕದ ರೈತರ ಜೀವನಾಡಿಯಾಗಿದೆ. ಇದನ್ನು ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಹಸ್ತಾಂತರಿಸುವ ಕೆಲಸದಿಂದ ಸರ್ಕಾರ ಹಿಂದೆ ಸರಿಯಬೇಕು’ ಎಂದು ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. </p>.<p>‘ಕಾಂಗ್ರೆಸ್ ಸರ್ಕಾರ ರೈತರ ಹಿತಾಸಕ್ತಿ ಕಾಪಾಡುತ್ತಿಲ್ಲ. ರೈತರ ಅಭಿಪ್ರಾಯ ಪಡೆಯದೇ ಕರ್ನಾಟಕ ನೀರಾವರಿ ನಿಗಮ ಅಧೀನದ ಭದ್ರಾ ಜಲಾಶಯವನ್ನು ಬೇರ್ಪಡಿಸುವ ದುಸ್ಸಾಹಸಕ್ಕೆ ಕಾಂಗ್ರೆಸ್ ಸರ್ಕಾರ ಕೈಹಾಕಿದೆ’ ಎಂದು ದೂರಿದರು. </p>.<p>‘ಬಳ್ಳಾರಿಯಲ್ಲಿ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಹಾಗೂ ಆ ಪಕ್ಷದ ಮುಖಂಡರು ನಡೆಸಿದ ದೌರ್ಜನ್ಯ ಖಂಡನೀಯವಾದುದು. ಶಾಸಕ ಭರತ್ ರೆಡ್ಡಿಯನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್. ರಾಜಶೇಖರ್ ಒತ್ತಾಯಿಸಿದರು. </p>.<p>‘ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಕೆಲಸ ಮಾಡಬೇಕಾಗಿದ್ದ ಬಳ್ಳಾರಿ ಶಾಸಕ ಹಿಟ್ಲರ್ ತರಹ ಆಡಳಿತ ನಡೆಸುತ್ತಿರುವುದು ಖಂಡನೀಯ. ಇದು ಪ್ರಜಾಪ್ರಭುತ್ವಕ್ಕೂ ಮಾರಕವಾದ ಬೆಳವಣಿಗೆಯಾಗಿದೆ’ ಎಂದರು. </p>.<p>ಮಾಜಿ ಶಾಸಕ ಎಂ.ಬಸವರಾಜ ನಾಯ್ಕ, ಮುಖಂಡರಾದ ಲೋಕಿಕೆರೆ ನಾಗರಾಜ, ಬಿ.ಎಂ.ಸತೀಶ್ ಕೊಳೇನಹಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧನಂಜಯ ಕಡ್ಲೇಬಾಳು, ಎನ್.ಎಚ್. ಹಾಲೇಶ ನಾಯ್ಕ, ಪಂಜು ಪೈಲ್ವಾನ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>