ಚನ್ನಗಿರಿ ತಾಲ್ಲೂಕು ಶಿವಾಜಿನಗರದ ಆಂಜನೇಯ (22) ಶರತ್ ಎಂಬವರನ್ನು ಕೂರಿಸಿಕೊಂಡು ಹೋಗುತ್ತಿದ್ದಾಗ ಅಪಘಾತ ಉಂಟಾಗಿದೆ. ರಸ್ತೆಗೆ ಬಿದ್ದ ಆಂಜನೇಯ ಅವರ ತಲೆಗೆ ಏಟು ಬಿದ್ದಿದೆ. ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ಒಯ್ಯುತ್ತಿದ್ದಾಗ ದಾರಿಮಧ್ಯೆ ಮೃತಪಟ್ಟಿದ್ದಾರೆ. ಶರತ್ಗೆ ಸಣ್ಣ ಗಾಯಗಳಾಗಿದ್ದು, ಜೀವಾಪಾಯದಿಂದ ಪಾರಾಗಿದ್ದಾರೆ. ಚನ್ನಗಿರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.