ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್‌ ಅಪಘಾತ: ಸವಾರ ಸಾವು

Last Updated 17 ಫೆಬ್ರುವರಿ 2020, 5:33 IST
ಅಕ್ಷರ ಗಾತ್ರ

ದಾವಣಗೆರೆ: ನ್ಯಾಮತಿ ತಾಲ್ಲೂಕಿನ ಮಾಚಗೊಂಡನಹಳ್ಳಿ ಗ್ರಾಮದ ಕೆರೆ ಏರಿಯ ರಸ್ತೆಯಲ್ಲಿ ಬೈಕ್‌ ಅಪಘಾತವಾಗಿ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಶಿವಮೊಗ್ಗ ತಾಲ್ಲೂಕು ಆಯನೂರು ಕೋಹಳ್ಳಿ ತಾಂಡಾದ ನವೀನ (25) ಮೃತಪಟ್ಟ ಯುವಕ. ಸೂರಗೊಂಡನಕೊಪ್ಪದಲ್ಲಿ ಸಂತ ಸೇವಾಲಾಲ್‌ ಜಯಂತಿಯಲ್ಲಿ ಪಾಲ್ಗೊಂಡು ಶನಿವಾರ ತನ್ನ ಬೈಕಲ್ಲಿ ವಾಪಸ್ಸಾಗುತ್ತಿದ್ದಾಗ ಬೈಕ್‌ ನಿಯಂತ್ರಣ ತಪ್ಪಿ ಕಬ್ಬಿಣದ ತಡೆಗೋಡೆಗೆ ಡಿಕ್ಕಿಯಾಗಿದೆ. ಸ್ಥಳದಲ್ಲೇ ಇದ್ದ ಅಖಿಲೇಶನಾಯ್ಕ, ಮಂಜುನಾಯ್ಕ ತಕ್ಷಣ ಉಪಚರಿಸುವ ವೇಳೆ ಅವರು ಮೃತಪಟ್ಟಿದ್ದಾರೆ. ಯುವಕನ ತಂದೆ ಕುಮಾರನಾಯ್ಕ ನೀಡಿದ ದೂರಿನಂತೆ ನ್ಯಾಮತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT