ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೊನ್ನಾಳಿ | ರಸ್ತೆ ವಿಭಜಕಕ್ಕೆ ಬೈಕ್‌ ಡಿಕ್ಕಿ: ಸವಾರ ಸಾವು

Published 3 ಮಾರ್ಚ್ 2024, 15:48 IST
Last Updated 3 ಮಾರ್ಚ್ 2024, 15:48 IST
ಅಕ್ಷರ ಗಾತ್ರ

ಹೊನ್ನಾಳಿ: ಇಲ್ಲಿನ ಶಿಕಾರಿಪುರ ರಸ್ತೆಯ ಗಡಿಚೌಡಮ್ಮನ ದೇವಸ್ಥಾನದ ಬಳಿ ಶನಿವಾರ ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರರೊಬ್ಬರು ಮೃತಪಟ್ಟಿದ್ದಾರೆ.

ತಾಲ್ಲೂಕಿನ ಗೊಲ್ಲರಹಳ್ಳಿಯ ಮಂಜುನಾಥ್ (21) ಮೃತಪಟ್ಟ ಯುವಕ.

ಗ್ರಾಮದಿಂದ ಸೊರಟೂರು ಗ್ರಾಮಕ್ಕೆ ಹೋಗುವಾಗ ಅತಿ ವೇಗವಾಗಿ ಬೈಕ್‌ ಓಡಿಸುತ್ತಿದ್ದ ಪರಿಣಾಮ ಬೈಕ್‌ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ ಎಂದು ಸಿಪಿಐ ಮುದ್ದುರಾಜ್ ತಿಳಿಸಿದ್ದಾರೆ. ಹೊನ್ನಾಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT