<p><strong>ಹರಪನಹಳ್ಳಿ:</strong> ಪಟ್ಟಣದ ಮುಖ್ಯರಸ್ತೆ, ವಿವಿಧ ಬಡಾವಣೆಗಳಲ್ಲಿ ನಿಯಮ ಮೀರಿ ಸಂಚರಿಸಿದ ಬೈಕ್, ವಾಹನ ವಶಕ್ಕೆ ಪಡೆದ ಪೊಲೀಸ್ ಅಧಿಕಾರಿಗಳು ದಂಡವಿಧಿಸಿ ಎಚ್ಚರಿಕೆ ನೀಡಿದ್ದಾರೆ.</p>.<p>ಸೋಮವಾರ ಬೆಳಿಗ್ಗೆ ಡಿವೈಎಸ್ಪಿ ವಿ.ಎಸ್. ಹಾಲಮೂರ್ತಿರಾವ್ ಮತ್ತು ಪಿಎಸ್ಐ ಪ್ರಕಾಶ್ ಅವರು ಪ್ರತ್ಯೇಕವಾಗಿ ಸಂಚರಿಸಿ ಅನಗತ್ಯವಾಗಿ ಓಡಾಡುತ್ತಿದ್ದವರ ಬೈಕ್ಗಳನ್ನು ಜಪ್ತಿ ಮಾಡಿದರು.ಅಂಗಡಿಗಳನ್ನು ತೆರೆದಿದ್ದವರಿಗೆ ಎಚ್ಚರಿಕೆ ನೀಡಿದರು.</p>.<p>ಬೆಳಿಗ್ಗೆ 6ರಿಂದ 10ರ ವರೆಗೂ ಅಗತ್ಯ ವಸ್ತುಗಳ ಮಾರಾಟಕ್ಕೆ ಸರ್ಕಾರ ಅನುಮತಿ ಕೊಟ್ಟಿದೆ. ಆದರೆ ಬೈಕ್, ಕಾರುಗಳಲ್ಲಿ ಸಂಚಾರ ಮಾಡದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಈ ನಿಯಮವನ್ನು ಉಲ್ಲಂಘಿಸಿದವರಿಗೆ ದಂಢ ಹಾಕಲಾಗುವುದು. ಪುನಃ ಇವರೇ ಸಿಕ್ಕಿಬಿದ್ದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಡಿವೈಎಸ್ಪಿ ಹಾಲಮೂರ್ತಿ ರಾವ್ ತಿಳಿಸಿದರು.</p>.<p>ಠಾಣೆ ಮುಂಭಾಗದಿಂದ ಹಿರೆಕೆರೆ ವೃತ್ತಕ್ಕೆ ತೆರಳಿದ ಅಧಿಕಾರಿಗಳು ಅಲ್ಲಿಯೂ ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ಲಾಠಿ ರುಚಿ ತೋರಿಸಿದರು.</p>.<p>ಪ್ರವಾಸಿ ಮಂದಿರ ವೃತ್ತ, ಹೊಸಪೇಟೆ ರಸ್ತೆ, ಬಣಗಾರ ಪೇಟೆ, ಮೇಗಳಪೇಟೆ, ಕೊಟ್ಟೂರು ರಸ್ತೆ, ತೆಗ್ಗಿನಮಠ ವೃತ್ತ, ಬಸ್ ನಿಲ್ದಾಣ, ಸಿನಿಮಾ ಮಂದಿರ ರಸ್ತೆಗಳಲ್ಲಿ ಸಂಚಾರ ಮಾಡಿದ ಪಿಎಸ್ಐ ಪ್ರಕಾಶ್, ನಿಯಮ ಉಲ್ಲಂಘಿಸಿದವರಿಗೆ ದಂಡವಿಧಿಸಿದರು. ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ:</strong> ಪಟ್ಟಣದ ಮುಖ್ಯರಸ್ತೆ, ವಿವಿಧ ಬಡಾವಣೆಗಳಲ್ಲಿ ನಿಯಮ ಮೀರಿ ಸಂಚರಿಸಿದ ಬೈಕ್, ವಾಹನ ವಶಕ್ಕೆ ಪಡೆದ ಪೊಲೀಸ್ ಅಧಿಕಾರಿಗಳು ದಂಡವಿಧಿಸಿ ಎಚ್ಚರಿಕೆ ನೀಡಿದ್ದಾರೆ.</p>.<p>ಸೋಮವಾರ ಬೆಳಿಗ್ಗೆ ಡಿವೈಎಸ್ಪಿ ವಿ.ಎಸ್. ಹಾಲಮೂರ್ತಿರಾವ್ ಮತ್ತು ಪಿಎಸ್ಐ ಪ್ರಕಾಶ್ ಅವರು ಪ್ರತ್ಯೇಕವಾಗಿ ಸಂಚರಿಸಿ ಅನಗತ್ಯವಾಗಿ ಓಡಾಡುತ್ತಿದ್ದವರ ಬೈಕ್ಗಳನ್ನು ಜಪ್ತಿ ಮಾಡಿದರು.ಅಂಗಡಿಗಳನ್ನು ತೆರೆದಿದ್ದವರಿಗೆ ಎಚ್ಚರಿಕೆ ನೀಡಿದರು.</p>.<p>ಬೆಳಿಗ್ಗೆ 6ರಿಂದ 10ರ ವರೆಗೂ ಅಗತ್ಯ ವಸ್ತುಗಳ ಮಾರಾಟಕ್ಕೆ ಸರ್ಕಾರ ಅನುಮತಿ ಕೊಟ್ಟಿದೆ. ಆದರೆ ಬೈಕ್, ಕಾರುಗಳಲ್ಲಿ ಸಂಚಾರ ಮಾಡದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಈ ನಿಯಮವನ್ನು ಉಲ್ಲಂಘಿಸಿದವರಿಗೆ ದಂಢ ಹಾಕಲಾಗುವುದು. ಪುನಃ ಇವರೇ ಸಿಕ್ಕಿಬಿದ್ದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಡಿವೈಎಸ್ಪಿ ಹಾಲಮೂರ್ತಿ ರಾವ್ ತಿಳಿಸಿದರು.</p>.<p>ಠಾಣೆ ಮುಂಭಾಗದಿಂದ ಹಿರೆಕೆರೆ ವೃತ್ತಕ್ಕೆ ತೆರಳಿದ ಅಧಿಕಾರಿಗಳು ಅಲ್ಲಿಯೂ ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ಲಾಠಿ ರುಚಿ ತೋರಿಸಿದರು.</p>.<p>ಪ್ರವಾಸಿ ಮಂದಿರ ವೃತ್ತ, ಹೊಸಪೇಟೆ ರಸ್ತೆ, ಬಣಗಾರ ಪೇಟೆ, ಮೇಗಳಪೇಟೆ, ಕೊಟ್ಟೂರು ರಸ್ತೆ, ತೆಗ್ಗಿನಮಠ ವೃತ್ತ, ಬಸ್ ನಿಲ್ದಾಣ, ಸಿನಿಮಾ ಮಂದಿರ ರಸ್ತೆಗಳಲ್ಲಿ ಸಂಚಾರ ಮಾಡಿದ ಪಿಎಸ್ಐ ಪ್ರಕಾಶ್, ನಿಯಮ ಉಲ್ಲಂಘಿಸಿದವರಿಗೆ ದಂಡವಿಧಿಸಿದರು. ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>