ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ವಾರಾಂತ್ಯ ಕರ್ಫ್ಯೂ ನಡುವೆಯೂ ಜಗಳೂರು ಶಾಸಕರ ಹುಟ್ಟುಹಬ್ಬ ಆಚರಣೆ

Last Updated 16 ಜನವರಿ 2022, 14:38 IST
ಅಕ್ಷರ ಗಾತ್ರ

ದಾವಣಗೆರೆ: ವಾರಾಂತ್ಯದ ಕರ್ಫ್ಯೂ ಇದ್ದರೂ ಜಗಳೂರು ಶಾಸಕ ಎಸ್‌.ವಿ. ರಾಮಚಂದ್ರ ಅವರು ತನ್ನ ಜನುಮ ದಿನವನ್ನು ಅಭಿಮಾನಿಗಳೊಂದಿಗೆ ಆಚರಿಸಿಕೊಂಡಿದ್ದಾರೆ.

ದಾವಣಗೆರೆ ಕೆ.ಬಿ. ಬಡಾವಣೆಯಲ್ಲಿರುವ ತನ್ನ ಮನೆಯ ಮುಂದೆ ಶಾಮಿಯಾನ, ವೇದಿಕೆ, ಕುರ್ಚಿಗಳನ್ನು ಹಾಕಲಾಗಿತ್ತು. ಅಭಿಮಾನಿಗಳು, ಜನಪ್ರತಿನಿಧಿಗಳು, ಬಿಜೆಪಿ ಕಾರ್ಯಕರ್ತರು, ಅಧಿಕಾರಿಗಳು, ಪೊಲೀಸರು ಭಾಗವಹಿಸಿ ಶಾಸಕರಿಗೆ ಶುಭಕೋರಿದರು. ಮಾಸ್ಕ್, ಅಂತರ ನಿಯಮಗಳಿಲ್ಲದೇ ಜನುಮದಿನದ ಆಚರಣೆ ನಡೆಯಿತು. ಬಂದವರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.

‘ನಮ್ಮಿಂದ ಯಾರೂ ಹುಟ್ಟಿದ ಹಬ್ಬದ ಕಾರ್ಯಕ್ರಮಕ್ಕೆ ಅನುಮತಿ ನೀಡಿಲ್ಲ. ನಮಗೆ ಯಾವುದೇ ಮಾಹಿತಿ ಇಲ್ಲ’ ಎಂದು ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಪ್ರತಿಕ್ರಿಯಿಸಿದ್ದಾರೆ.

ಕೊರೊನಾ ನಿಯಮ, ವಾರಾಂತ್ಯ ಕರ್ಫ್ಯೂ ನಿಯಮ ಜನಸಾಮಾನ್ಯರಿಗೆ, ವಿರೋಧ ಪಕ್ಷಗಳಿಗೆ ಮಾತ್ರವೇ? ಬಿಜೆಪಿ ಶಾಸಕರಿಗೆ ಅನ್ವಯವಾಗುದಿಲ್ಲವೇ? ಕಳೆದ ವಾರ ಹೋರಿ ಹಬ್ಬದಲ್ಲಿ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಕೋವಿಡ್‌ ನಿಯಮ ಮುರಿದಿದ್ದರು. ಈ ವಾರ ಜಗಳೂರು ಶಾಸಕರು ನಿಯಮ ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಹರೀಶ್‌ ಬಸಾಪುರ ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT