‘ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಜೀನಹಳ್ಳಿ ಚೆಕ್ಪೋಸ್ಟ್ನಲ್ಲಿ ಎಸ್.ಎಸ್.ಟಿ ತಂಡದಲ್ಲಿ ಸೇವೆ ಸಲ್ಲಿಸುವಂತೆ ಈ ಇಬ್ಬರನ್ನು ನೇಮಕ ಮಾಡಲಾಗಿತ್ತು. ಏಪ್ರಿಲ್ 29ರಂದು ವಿಶೇಷ ವೆಚ್ಚ ವೀಕ್ಷಕರು ಮತ್ತು ಸಹಾಯಕ ಚುನಾವಣಾಧಿಕಾರಿ ಚೆಕ್ಪೋಸ್ಟ್ಗೆ ಅನಿರೀಕ್ಷಿತ ಭೇಟಿ ನೀಡಿದಾಗ ಈ ಇಬ್ಬರು ಸ್ಥಳದಲ್ಲಿ ಇರಲಿಲ್ಲ. ಈ ಬಗ್ಗೆ ಎಚ್ಚರಿಸಿದ ಬಳಿಕವೂ ಗೈರಾಗಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾ ಚುನಾವಣಾಧಿಕಾರಿ ಅಮಾನತು ಮಾಡಿದ್ದಾರೆ’ ಎಂದು ಸಹಾಯಕ ಚುನಾವಣಾಧಿಕಾರಿ ವಿ. ಅಭಿಷೇಕ್ ತಿಳಿಸಿದ್ದಾರೆ.