ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಪರೇಷನ್ ಕಮಲಕ್ಕೆ ನಾವು ಕೈ ಹಾಕುವುದಿಲ್ಲ: ಶ್ರೀರಾಮುಲು

Last Updated 9 ಜೂನ್ 2019, 8:44 IST
ಅಕ್ಷರ ಗಾತ್ರ

ದಾವಣಗೆರೆ:ಆಪರೇಷನ್ ಕಮಲಕ್ಕೆ ನಾವು ಕೈ ಹಾಕುವುದಿಲ್ಲ. ಆಪರೇಷನ್ ಕಮಲದಿಂದ ದೂರವಿರುವಂತೆ ಹೈ ಕಮಾಂಡ್ ಹೇಳಿದೆ ಎಂದು ಶಾಸಕ ಬಿ.ಶ್ರೀರಾಮುಲು ಹೇಳಿದರು.

ರಾಜನಹಳ್ಳಿ ಗುರುಪೀಠದಲ್ಲಿ ಪಾದಯಾತ್ರೆ ವೇಳೆ ಮಾತನಾಡಿ,ಸದ್ಯ ಸಮ್ಮಿಶ್ರ ಸರ್ಕಾರ ಒಡೆದ ಮನೆ ಇದ್ದಂತಿದೆ. ಒಡೆದ ಮನೆಯಲ್ಲಿ ಯಾವ ರೀತಿ ಸಂಸಾರ ಮಾಡಲುಆಗುವುದಿಲ್ಲವೋ ಅದೇ ರೀತಿ ಸರ್ಕಾರ ನಡೆಸಲು ಸಾಧ್ಯವಿಲ್ಲ. ಒಡೆದ ಮನೆಯಲ್ಲಿ ಸಮ್ಮಿಶ್ರ ಸರ್ಕಾರ ಸಂಸಾರ ಮಾಡುತ್ತಿದೆ. ಅದು ಬಹಳ ದಿನ ಇರೋದಿಲ್ಲ ಎಂದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ಅದರ ಬಗ್ಗೆ ಸಮ್ಮಿಶ್ರ ಸರ್ಕಾರ ತಲೆ ಕೆಡಿಸಿಕೊಳ್ಳುತ್ತಿಲ್ಲ. ಬಿಜೆಪಿ ಬರ ಪ್ರವಾಸ ಮಾಡಿ ಜನರ ಸಮಸ್ಯೆ ಅಲಿಸುತ್ತಿದೆ. ಸಮ್ಮಿಶ್ರ ಸರ್ಕಾರದಲ್ಲಿ ಅರಾಜಕತೆ ಇದೆ. ಇದರಿಂದ ಶಾಸಕರು, ಸಚಿವರು ಕುಣಿದು ಕುಪ್ಪಳಿಸುತ್ತಾರೆ. ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT