<p><strong>ತ್ಯಾವಣಿಗೆ:</strong> ರಾಜ್ಯದಲ್ಲಿ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸುತ್ತಿರುವುದನ್ನು ಖಂಡಿಸಿ ಬಿಜೆಪಿ ಗ್ರಾಮೀಣ ಮಂಡಲ ವತಿಯಿಂದ ತ್ಯಾವಣಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಶುಕ್ರವಾರ ಮೌನ ಪ್ರತಿಭಟನೆ ನಡೆಸಲಾಯಿತು.</p>.<p>ಬಿಜೆಪಿ ಕಾರ್ಯಕರ್ತರು ತೋಳಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ರಾಜ್ಯ ಸರ್ಕಾರದ ನಡೆ ವಿರುದ್ಧ ಪ್ರತಿಭಟಿಸಿದರು. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ನೆರವಾಗಿದ್ದ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಮೂಲಕ ಸರ್ಕಾರ ತೊಂದರೆಯುಂಟು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಡಿಮೆ ದರದಲ್ಲಿ ಗುಣಮಟ್ಟದ ಔಷಧಿ ದೊರೆಯಬೇಕು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ತೆರೆದಿರುವ ಕೇಂದ್ರದಗಳನ್ನು ಮುಚ್ಚಬಾರದು. ರಾಜ್ಯ ಸರ್ಕಾರ ತನ್ನ ಆದೇಶವನ್ನು ಕೊಡಲೇ ಹಿಂಪಡಿಯಬೇಕು ಎಂದು ಮಂಡಲ ಅಧ್ಯಕ್ಷ ಸಚಿನ್ ಬಿ.ಜಿ. ಒತ್ತಾಯಿಸಿದರು.</p>.<p>ಸರ್ಕಾರವು ಜನೌಷಧ ಕೇಂದ್ರಗಳನ್ನು ಮುಚ್ಚಿ ಡ್ರಗ್ಸ್ ಮಾಫಿಯಾ ಮೂಲಕ ಎಲ್ಲ ಖಾಸಗಿ ಔಷಧ ಅಂಗಡಿ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಹೊರಟಿದೆ ಎಂದು ಪ್ರತಿಭಟನನಿರತರು ಆರೋಪಿಸಿದರು.</p>.<p>ಮಾಜಿ ಶಾಸಕ ಎಂ.ಬಸವರಾಜ್ ನಾಯ್ಕ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ್ ನಾಗಪ್ಪ, ಪ್ರಧಾನ ಕಾರ್ಯದರ್ಶಿ ಅನಿಲ್ ನಾಯ್ಕ್, ಎಸ್.ಟಿ. ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್. ಕೃಷ್ಣಪ್ಪ, ಮಲ್ಲಿಕಾರ್ಜುನ್, ಡಿ.ಆರ್. ಹಾಲೇಶ್, ಪ್ರಶಾಂತ್, ಷಣ್ಮುಖಪ್ಪ, ಶಿವು, ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತ್ಯಾವಣಿಗೆ:</strong> ರಾಜ್ಯದಲ್ಲಿ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸುತ್ತಿರುವುದನ್ನು ಖಂಡಿಸಿ ಬಿಜೆಪಿ ಗ್ರಾಮೀಣ ಮಂಡಲ ವತಿಯಿಂದ ತ್ಯಾವಣಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಶುಕ್ರವಾರ ಮೌನ ಪ್ರತಿಭಟನೆ ನಡೆಸಲಾಯಿತು.</p>.<p>ಬಿಜೆಪಿ ಕಾರ್ಯಕರ್ತರು ತೋಳಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ರಾಜ್ಯ ಸರ್ಕಾರದ ನಡೆ ವಿರುದ್ಧ ಪ್ರತಿಭಟಿಸಿದರು. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ನೆರವಾಗಿದ್ದ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಮೂಲಕ ಸರ್ಕಾರ ತೊಂದರೆಯುಂಟು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಡಿಮೆ ದರದಲ್ಲಿ ಗುಣಮಟ್ಟದ ಔಷಧಿ ದೊರೆಯಬೇಕು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ತೆರೆದಿರುವ ಕೇಂದ್ರದಗಳನ್ನು ಮುಚ್ಚಬಾರದು. ರಾಜ್ಯ ಸರ್ಕಾರ ತನ್ನ ಆದೇಶವನ್ನು ಕೊಡಲೇ ಹಿಂಪಡಿಯಬೇಕು ಎಂದು ಮಂಡಲ ಅಧ್ಯಕ್ಷ ಸಚಿನ್ ಬಿ.ಜಿ. ಒತ್ತಾಯಿಸಿದರು.</p>.<p>ಸರ್ಕಾರವು ಜನೌಷಧ ಕೇಂದ್ರಗಳನ್ನು ಮುಚ್ಚಿ ಡ್ರಗ್ಸ್ ಮಾಫಿಯಾ ಮೂಲಕ ಎಲ್ಲ ಖಾಸಗಿ ಔಷಧ ಅಂಗಡಿ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಹೊರಟಿದೆ ಎಂದು ಪ್ರತಿಭಟನನಿರತರು ಆರೋಪಿಸಿದರು.</p>.<p>ಮಾಜಿ ಶಾಸಕ ಎಂ.ಬಸವರಾಜ್ ನಾಯ್ಕ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ್ ನಾಗಪ್ಪ, ಪ್ರಧಾನ ಕಾರ್ಯದರ್ಶಿ ಅನಿಲ್ ನಾಯ್ಕ್, ಎಸ್.ಟಿ. ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್. ಕೃಷ್ಣಪ್ಪ, ಮಲ್ಲಿಕಾರ್ಜುನ್, ಡಿ.ಆರ್. ಹಾಲೇಶ್, ಪ್ರಶಾಂತ್, ಷಣ್ಮುಖಪ್ಪ, ಶಿವು, ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>