‘ದೇಶದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಎಲ್ಲಾ ಫಲಾನುಭವಿಗಳಿಗೆ ಕೇಂದ್ರದಿಂದ 5 ಕೆ.ಜಿ. ಅಕ್ಕಿ ವಿತರಿಸಲಾಗುತ್ತಿದೆ. ಎಲ್ಲ ಬಡವರ ಮನೆಗೂ ಗ್ಯಾಸ್ ಸಿಲಿಂಡರ್ ಸಂಪರ್ಕ ನೀಡಿ ಹೊಗೆರಹಿತ ಅಡುಗೆಮನೆ ಸಾಧ್ಯ ಮಾಡಲಾಗಿದೆ. 28,000 ಹಳ್ಳಿಗಳ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಈ ಎಲ್ಲಾ ಅಂಶಗಳು ಅಭಿವೃದ್ಧಿಯನ್ನು ಪ್ರತಿಬಿಂಬಿಸುವುದಿಲ್ಲವೇ’ ಎಂದು ಪ್ರಶ್ನಿಸಿದರು.