ಮೇ 23ರ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆಗಳು ಆಗಲಿವೆ. ಬಿ.ಎಸ್. ಯಡಿಯೂರಪ್ಪ ಮತ್ತೆ ಸಿಎಂ ಆಗಲಿದ್ದಾರೆ. ಆಪರೇಷನ್ ಕಮಲ ಮಾಡುವ ಪ್ರಮೇಯವೇ ಬರುವುದಿಲ್ಲ. ಸರ್ಕಾರ ರಚಿಸಲು ಅಗತ್ಯ ಇರುವಷ್ಟು ಶಾಸಕರು ಸ್ವ ಇಚ್ಛೆಯಿಂದಲೇ ಬಿಜೆಪಿಗೆ ಬರಲಿದ್ದಾರೆ. ಯಾರು ಎಂಬುದನ್ನು ಕಾದು ನೋಡಿ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.