ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ರವರು ಅವರನ್ನು ಬೆಂಬಲಿಸಿ ಜಿಲ್ಲಾ ಮಾಜಿ ಸದಸ್ಯ, ಬಿಜೆಪಿ ಮುಖಂಡ ಬಿ.ಎಂ. ವಾಗೀಶ್ಸ್ವಾಮಿ ಹಾಗೂ ಮಲೇಬೆನ್ನೂರಿನ ನಾಲ್ವರು ಪುರಸಭಾ ಸದಸ್ಯರು ಸೇರಿದಂತೆ ಅನೇಕರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ನಿವಾಸದಲ್ಲಿ ಗುರುವಾರ ಕಾಂಗ್ರೆಸ್ಗೆ ಸೇರ್ಪಡೆಗೊಂಡರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಯಕೊಂಡ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ವಾಗೀಶ್ ಸ್ವಾಮಿ ಹಾಗೂ ಮಲೇಬೆನ್ನೂರು ಪುರಸಭೆ ಬಿಜೆಪಿ ಸದಸ್ಯರಾದ ಮಂಜುನಾಥ್, ಗೌಡ್ರು ಮಂಜುನಾಥ್, ಅಕ್ಕಮ್ಮ ಬಿ.ಸುರೇಶ್, ಪಿ.ಆರ್.ಸುಧಾ ಸೇರ್ಪಡೆಗೊಂಡರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಜನಪರ ಕಾರ್ಯಕ್ರಮಗಳು ಹಾಗೂ ಕಾಂಗ್ರೆಸ್ ಗ್ಯಾರಂಟಿಗಳಿಗೆ ಮನಸೋತು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ. ಇದು ನನ್ನ ವೈಯಕ್ತಿಕ ನಿರ್ಧಾರ, ಬಿಜೆಪಿ ಪಕ್ಷದಿಂದ ನನ್ನನ್ನು ಉಚ್ಚಾಟಿಸಿಲ್ಲ’ ಎಂದು ವಾಗೀಶ್ ಸ್ವಾಮಿ ಹೇಳಿದರು.
ಸೇರ್ಪಡೆಯಾದ ಮುಖಂಡರು: ಮುಖಂಡರಾದ ಸುರೇಶ್ ಬಿ., ಚಂದ್ರಪ್ಪ ಬಿ., ಗೋವಿನಹಾಳು ದಯಾನಂದ್, ರಾಜಪ್ಪ ಕೆ.ಜಿ., ಕಡೆಮನಿ ದೇವೆಂದ್ರಪ್ಪ ಹೊಳೆಸಿರಿಗೆರೆ, ಮಂಜುನಾಥ್ ಸಿರಿಗೆರೆ, ಮಲ್ಲೇಶಪ್ಪ ಮಾಳಿಗಿ, ಪ್ರಕಾಶ್, ಕಡ್ಲೆಗೊಂದಿ ಕೇಶವಮೂರ್ತಿ, ಓಬಳೇಶಪ್ಪ ಲೋಕಿಕೆರೆ, ಮಂಜಣ್ಣ ಕುರಿ, ಆನಂದಪ್ಪ ಕಲ್ಕೆರೆ ಕ್ಯಾಂಪ್, ನಾಗಣ್ಣ ಸುಲ್ತಾನಿಪುರ, ಎನ್.ಬಿ.ಗಂಗಾಧರಪ್ಪ ವಕೀಲರು ಹೊಳೆ ಸಿರಿಗೆರೆ, ಪಂಚಮಸಾಲಿ ಸಮಾಜದ ಅಶೋಕ್, ವಿಜಯಕುಮಾರ್ ಹದಡಿ, ಎಲ್.ಆರ್.ಕರಿಯಣ್ಣ ಸುಲ್ತಾನಿಪುರ, ನಿಂಗಪ್ಪ ಮೆಣಸಿನಕಾಯಿ, ಶ್ರೀನಿವಾಸ ಭಜರಂಗಿ, ಆಕಾಶ್, ಬಿ. ಮಹಾರುದ್ರಪ್ಪ ಅವರು ಕಾಂಗ್ರೆಸ್ ಸೇರ್ಪಡೆಗೊಂಡರು.
ಮಾಜಿ ಶಾಸಕ ಎಸ್.ರಾಮಪ್ಪ, ಮುಖಂಡರಾದ ನಂದಿಗಾವಿ ಶ್ರೀನಿವಾಸ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಮಾರ್, ಯೂನಿಯನ್ ಬ್ಯಾಂಕ್ನ ಸಿರಿಗೆರೆ ರಾಜಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬೆಳ್ಳೂಡಿ ಬಸವರಾಜ್, ಮಂಜುನಾಥ ಪಟೇಲ್, ಆನಂದಪ್ಪ, ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಪ್ರಕಾಶ್ ಪಾಟೀಲ್, ಮಹಾನಗರ ಪಾಲಿಕೆ ಸದಸ್ಯ ಎ.ನಾಗರಾಜ್, ಹುಲ್ಮನಿ ಗಣೇಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.