<p><strong>ದಾವಣಗೆರೆ:</strong> ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಬಿ.ವೈ. ವಿಜಯೇಂದ್ರ ಅವರನ್ನು ಬದಲಾವಣೆ ಮಾಡದೇ ಇದ್ದರೆ ಹೊಸ ಪಕ್ಷ ಕಟ್ಟುತ್ತೇವೆ. ಬಿಜೆಪಿಯ ನಿಷ್ಠಾವಂತರು ಹೊಸ ಪಕ್ಷಕ್ಕೆ ಬರುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು.</p><p>‘ವಿಜಯೇಂದ್ರ ಬಿಜೆಪಿ ಚುಕ್ಕಾಣಿ ಹಿಡಿದ ಬಳಿಕ ಪಕ್ಷ ದುರ್ಬಲವಾಗಿದೆ. ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಪಕ್ಷ ಹೀನಾಯ ಸೋಲು ಕಂಡಿದೆ. ಹೀಗಾಗಿ, ವಿಜಯೇಂದ್ರ ಬದಲಾವಣೆಗೆ ನಾಯಕರು ಪಟ್ಟು ಹಿಡಿದ್ದಾರೆ’ ಎಂದು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು.</p><p>‘ವಿಜಯೇಂದ್ರ ನಾಲ್ಕಾರು ಬೆಂಬಲಿಗರನ್ನು ಜೊತೆಯಲ್ಲಿಟ್ಟುಕೊಂಡು ರಾಜ್ಯ ಸುತ್ತುತ್ತಿದ್ದಾರೆ. ಹಿಂಬಾಲಕರನ್ನು ಮಾತ್ರ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿಕೊಂಡಿದ್ದಾರೆ. ಇಂತಹ ಕಾರ್ಯಗಳು ಪಕ್ಷನಿಷ್ಠರಲ್ಲಿ ಬೇಸರ ಮೂಡಿಸಿವೆ’ ಎಂದರು.</p><p>‘ಕಾರಿನ ಡಿಕ್ಕಿಯಲ್ಲಿ ಶಾಲು, ಹಾರ ಇಟ್ಟುಕೊಂಡು ಸನ್ಮಾನ ಮಾಡಿಸಿಕೊಳ್ಳುತ್ತಾರೆ. ಬೆಂಬಲಿಗರನ್ನು ಮುಂದೆಬಿಟ್ಟು ಜೈಕಾರ ಹಾಕಿಸಿಕೊಳ್ಳುತ್ತಾರೆ. ಕರ್ನಾಟಕದಲ್ಲಿ ಹಿಂದುತ್ವದ ಅಲೆ ಎದ್ದಿದೆ. ಬಿಜೆಪಿಗೆ ಪರ್ಯಾಯವಾಗಿ ಹೊಸ ಪಕ್ಷ ಕಟ್ಟಿದರೆ ನಿರೀಕ್ಷೆಗಿಂತ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ನಿಶ್ಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p><p>‘ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಜೆಪಿಗೆ ಬಂದು ಮುಖ್ಯಮಂತ್ರಿಯಾದರೆ ವಿಜಯೇಂದ್ರ ಉಪಮುಖ್ಯಮಂತ್ರಿ ಆಗುತ್ತಾರೆ ಎನ್ನಲಾಗುತ್ತಿದೆ. ಒಂದು ವೇಳೆ ಇದು ನಿಜವಾದರೆ ಕರ್ನಾಟಕದ ನೈಸರ್ಗಿಕ ಸಂಪತ್ತು ಉಳಿಯುವುದಿಲ್ಲ. ಉಸಿರಾಡುವ ಗಾಳಿಗೂ ತೆರಿಗೆ ಕಟ್ಟಬೇಕಾದ ಸ್ಥಿತಿ ನಿರ್ಮಾಣವಾಗುತ್ತದೆ’ ಎಂದು ಆರೋಪಿಸಿದರು.</p>.<div><blockquote>ಬಿಜೆಪಿಯ ಭಿನ್ನಮತೀಯ ಚಟುವಟಿಕೆಗೆಳಿಗೆ ನಾನು ಸೂತ್ರದಾರನಲ್ಲ. ರಮೇಶ್ ಜಾರಕಿಹೊಳಿ ಅವರಿಗೆ ವಿಜಯೇಂದ್ರ ಮೋಸ ಮಾಡಿದ್ದಾರೆ. ಪಕ್ಷದ ನಿಷ್ಠಾವಂತ ನಾಯಕರು ಒಂದೆಡೆ ಸೇರಿ ಚರ್ಚಿಸಿದ್ದಾರೆ</blockquote><span class="attribution">ಬಸನಗೌಡ ಪಾಟೀಲ ಯತ್ನಾಳ, ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಬಿ.ವೈ. ವಿಜಯೇಂದ್ರ ಅವರನ್ನು ಬದಲಾವಣೆ ಮಾಡದೇ ಇದ್ದರೆ ಹೊಸ ಪಕ್ಷ ಕಟ್ಟುತ್ತೇವೆ. ಬಿಜೆಪಿಯ ನಿಷ್ಠಾವಂತರು ಹೊಸ ಪಕ್ಷಕ್ಕೆ ಬರುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು.</p><p>‘ವಿಜಯೇಂದ್ರ ಬಿಜೆಪಿ ಚುಕ್ಕಾಣಿ ಹಿಡಿದ ಬಳಿಕ ಪಕ್ಷ ದುರ್ಬಲವಾಗಿದೆ. ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಪಕ್ಷ ಹೀನಾಯ ಸೋಲು ಕಂಡಿದೆ. ಹೀಗಾಗಿ, ವಿಜಯೇಂದ್ರ ಬದಲಾವಣೆಗೆ ನಾಯಕರು ಪಟ್ಟು ಹಿಡಿದ್ದಾರೆ’ ಎಂದು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು.</p><p>‘ವಿಜಯೇಂದ್ರ ನಾಲ್ಕಾರು ಬೆಂಬಲಿಗರನ್ನು ಜೊತೆಯಲ್ಲಿಟ್ಟುಕೊಂಡು ರಾಜ್ಯ ಸುತ್ತುತ್ತಿದ್ದಾರೆ. ಹಿಂಬಾಲಕರನ್ನು ಮಾತ್ರ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿಕೊಂಡಿದ್ದಾರೆ. ಇಂತಹ ಕಾರ್ಯಗಳು ಪಕ್ಷನಿಷ್ಠರಲ್ಲಿ ಬೇಸರ ಮೂಡಿಸಿವೆ’ ಎಂದರು.</p><p>‘ಕಾರಿನ ಡಿಕ್ಕಿಯಲ್ಲಿ ಶಾಲು, ಹಾರ ಇಟ್ಟುಕೊಂಡು ಸನ್ಮಾನ ಮಾಡಿಸಿಕೊಳ್ಳುತ್ತಾರೆ. ಬೆಂಬಲಿಗರನ್ನು ಮುಂದೆಬಿಟ್ಟು ಜೈಕಾರ ಹಾಕಿಸಿಕೊಳ್ಳುತ್ತಾರೆ. ಕರ್ನಾಟಕದಲ್ಲಿ ಹಿಂದುತ್ವದ ಅಲೆ ಎದ್ದಿದೆ. ಬಿಜೆಪಿಗೆ ಪರ್ಯಾಯವಾಗಿ ಹೊಸ ಪಕ್ಷ ಕಟ್ಟಿದರೆ ನಿರೀಕ್ಷೆಗಿಂತ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ನಿಶ್ಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p><p>‘ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಜೆಪಿಗೆ ಬಂದು ಮುಖ್ಯಮಂತ್ರಿಯಾದರೆ ವಿಜಯೇಂದ್ರ ಉಪಮುಖ್ಯಮಂತ್ರಿ ಆಗುತ್ತಾರೆ ಎನ್ನಲಾಗುತ್ತಿದೆ. ಒಂದು ವೇಳೆ ಇದು ನಿಜವಾದರೆ ಕರ್ನಾಟಕದ ನೈಸರ್ಗಿಕ ಸಂಪತ್ತು ಉಳಿಯುವುದಿಲ್ಲ. ಉಸಿರಾಡುವ ಗಾಳಿಗೂ ತೆರಿಗೆ ಕಟ್ಟಬೇಕಾದ ಸ್ಥಿತಿ ನಿರ್ಮಾಣವಾಗುತ್ತದೆ’ ಎಂದು ಆರೋಪಿಸಿದರು.</p>.<div><blockquote>ಬಿಜೆಪಿಯ ಭಿನ್ನಮತೀಯ ಚಟುವಟಿಕೆಗೆಳಿಗೆ ನಾನು ಸೂತ್ರದಾರನಲ್ಲ. ರಮೇಶ್ ಜಾರಕಿಹೊಳಿ ಅವರಿಗೆ ವಿಜಯೇಂದ್ರ ಮೋಸ ಮಾಡಿದ್ದಾರೆ. ಪಕ್ಷದ ನಿಷ್ಠಾವಂತ ನಾಯಕರು ಒಂದೆಡೆ ಸೇರಿ ಚರ್ಚಿಸಿದ್ದಾರೆ</blockquote><span class="attribution">ಬಸನಗೌಡ ಪಾಟೀಲ ಯತ್ನಾಳ, ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>