ವಿವಾದಿತ ಸಂಭಾಷಣೆ: ಅಂಜಿನಪ್ಪ ಅವರ ಸ್ನೇಹಿತ ರೇವಣಸಿದ್ದಪ್ಪ ವ್ಯಕ್ತಿಯೊಬ್ಬರಿಗೆ ಸಾಲ ನೀಡಿದ್ದು, ಸಾಲ ವಸೂಲಿಯ ಬಗ್ಗೆ ಅಂಜಿನಪ್ಪಗೆ ಮೊಬೈಲ್ನಲ್ಲಿ ಕರೆ ಮಾಡಿ ಮಾತನಾಡುವಾಗ, ‘ನನಗೆ ನಿನ್ನ ಬೆಂಬಲ ಬೇಕು’ ಎಂದು ರೇವಣಸಿದ್ದಪ್ಪ ಕೇಳುತ್ತಾರೆ. ಇದಕ್ಕೆ ಅಂಜಿನಪ್ಪ, ‘ನಾನಿರುವುದೇ ಬೆಂಬಲ ಕೊಡಲು. ನೂರಕ್ಕೆ ನೂರು ಪರ್ಸೆಂಟ್ ನಿನಗೆ ಸದಾ ನನ್ನ ಬೆಂಬಲ ಇರುತ್ತದೆ’ ಎಂದಿದ್ದಾರೆ. ನಂತರ ಲಿಂಗಾಯತ, ಮಡಿವಾಳ ಹಾಗೂ ಪರಿಶಿಷ್ಟ ಜಾತಿಯ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸಿದ್ದಾರೆ.