<p><strong>ಹೊನ್ನಾಳಿ: ‘</strong>ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಸೇರಿದಂತೆ ಯಾವುದೇ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಘೋಷಣೆಯಾದರು ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರು ಸಿದ್ಧರಾಗಿದ್ದಾರೆ’ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.</p>.<p>ಸೋಮವಾರ ಗುರುಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ, ವಿಬಿಜಿ ರಾಮ್ಜಿ ಯೋಜನೆ, ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರವಾಗಿ ಹಮ್ಮಿಕೊಂಡಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದರು.</p>.<p>ಹೊನ್ನಾಳಿ ಪುರಸಭೆ ಹಾಗೂ ನ್ಯಾಮತಿ ಪಟ್ಟಣ ಪಂಚಾಯಿತಿಯನ್ನು ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳುವುದೇ ನಮ್ಮ ಗುರಿ. ಅದಾದ ನಂತರ 2028ರ ಸಾರ್ವತ್ರಿಕ ಚುನಾವಣೆಯಲ್ಲೂ ನಾವು ಜಯಭೇರಿ ಬಾರಿಸಲಿದ್ದೇವೆ ಎಂದು ಹೇಳಿದರು.</p>.<p>ರಾಜ್ಯದಲ್ಲಿ ಇತ್ತೀಚೆಗೆ ನಡೆದ ಬಳ್ಳಾರಿ ಘಟನೆ, ಮಹಿಳೆಯ ವಿವಸ್ತ್ರ ವಿಚಾರ, ಅಧಿಕಾರಿಗಳ ಮೇಲೆ ದೌರ್ಜನ್ಯ ಮತ್ತು ಅಬಕಾರಿ ಹಗರಣಗಳೇ ಕಾಂಗ್ರೆಸ್ ಸರ್ಕಾರದ ಸಾಧನೆಗಳಾಗಿವೆ ಎಂದು ದೂರಿದರು.</p>.<p>ಜಿ.ಪಂ. ಮಾಜಿ ಸದಸ್ಯ ಸುರೇಂದ್ರನಾಯ್ಕ, ರಾಜ್ಯ ಬಿಜೆಪಿ ಒಬಿಸಿ ಉಪಾಧ್ಯಕ್ಷ ಕೆ.ಪಿ. ಕುಬೇಂದ್ರಪ್ಪ, ಮುಖಂಡ ಮಂಜುನಾಥ ನೆಲಹೊನ್ನೆ, ಮಾಜಿ ಅಧ್ಯಕ್ಷ ಜೆ.ಕೆ. ಸುರೇಶ್, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಅರಕೆರೆ ನಾಗರಾಜ್, ಬಾಬು ಹೋಬಳದಾರ್ ಮಾತನಾಡಿದರು.</p>.<p>ಕಡ್ಲೆಬಾಳು ಧನಂಜಯ್, ಮುಖಂಡರಾದ ಮಂಜುನಾಥ್ ಇಂಚರ, ರಮೇಶ್ಗೌಡ, ಡಿ.ಜಿ. ರಾಜಪ್ಪ, ಸಿ.ಆರ್. ಶಿವಾನಂದ, ಎಂ.ಎಸ್. ಫಾಲಾಕ್ಷಪ್ಪ, ಮಾರುತಿನಾಯ್ಕ, ಲಿಂಗರಾಜ್ ಹವಳದ, ಪುರಸಭೆ ಮಾಜಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು. <br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ: ‘</strong>ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಸೇರಿದಂತೆ ಯಾವುದೇ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಘೋಷಣೆಯಾದರು ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರು ಸಿದ್ಧರಾಗಿದ್ದಾರೆ’ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.</p>.<p>ಸೋಮವಾರ ಗುರುಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ, ವಿಬಿಜಿ ರಾಮ್ಜಿ ಯೋಜನೆ, ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರವಾಗಿ ಹಮ್ಮಿಕೊಂಡಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದರು.</p>.<p>ಹೊನ್ನಾಳಿ ಪುರಸಭೆ ಹಾಗೂ ನ್ಯಾಮತಿ ಪಟ್ಟಣ ಪಂಚಾಯಿತಿಯನ್ನು ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳುವುದೇ ನಮ್ಮ ಗುರಿ. ಅದಾದ ನಂತರ 2028ರ ಸಾರ್ವತ್ರಿಕ ಚುನಾವಣೆಯಲ್ಲೂ ನಾವು ಜಯಭೇರಿ ಬಾರಿಸಲಿದ್ದೇವೆ ಎಂದು ಹೇಳಿದರು.</p>.<p>ರಾಜ್ಯದಲ್ಲಿ ಇತ್ತೀಚೆಗೆ ನಡೆದ ಬಳ್ಳಾರಿ ಘಟನೆ, ಮಹಿಳೆಯ ವಿವಸ್ತ್ರ ವಿಚಾರ, ಅಧಿಕಾರಿಗಳ ಮೇಲೆ ದೌರ್ಜನ್ಯ ಮತ್ತು ಅಬಕಾರಿ ಹಗರಣಗಳೇ ಕಾಂಗ್ರೆಸ್ ಸರ್ಕಾರದ ಸಾಧನೆಗಳಾಗಿವೆ ಎಂದು ದೂರಿದರು.</p>.<p>ಜಿ.ಪಂ. ಮಾಜಿ ಸದಸ್ಯ ಸುರೇಂದ್ರನಾಯ್ಕ, ರಾಜ್ಯ ಬಿಜೆಪಿ ಒಬಿಸಿ ಉಪಾಧ್ಯಕ್ಷ ಕೆ.ಪಿ. ಕುಬೇಂದ್ರಪ್ಪ, ಮುಖಂಡ ಮಂಜುನಾಥ ನೆಲಹೊನ್ನೆ, ಮಾಜಿ ಅಧ್ಯಕ್ಷ ಜೆ.ಕೆ. ಸುರೇಶ್, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಅರಕೆರೆ ನಾಗರಾಜ್, ಬಾಬು ಹೋಬಳದಾರ್ ಮಾತನಾಡಿದರು.</p>.<p>ಕಡ್ಲೆಬಾಳು ಧನಂಜಯ್, ಮುಖಂಡರಾದ ಮಂಜುನಾಥ್ ಇಂಚರ, ರಮೇಶ್ಗೌಡ, ಡಿ.ಜಿ. ರಾಜಪ್ಪ, ಸಿ.ಆರ್. ಶಿವಾನಂದ, ಎಂ.ಎಸ್. ಫಾಲಾಕ್ಷಪ್ಪ, ಮಾರುತಿನಾಯ್ಕ, ಲಿಂಗರಾಜ್ ಹವಳದ, ಪುರಸಭೆ ಮಾಜಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು. <br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>