<p><strong>ದಾವಣಗೆರೆ</strong>: ಗೋಮಾಂಸ ರಫ್ತುವಿನಲ್ಲಿ ಭಾರತವು ವಿಶ್ವದಲ್ಲೇ 2ನೇ ಸ್ಥಾನದಲ್ಲಿದೆ. ಗೋಮಾಂಸ ಉತ್ಪಾದನೆಯಲ್ಲಿ ಉತ್ತರಪ್ರದೇಶ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ನಿತ್ಯ ಬೆಳಗಾದರೆ ಗೋಮಾಂಸ ನಿಷೇಧದ ಬಗ್ಗೆ ಮಾತನಾಡುವ ಬಿಜೆಪಿಗೆ ಇದನ್ನು ತಡೆಯಲು ಈವರೆಗೆ ಏಕೆ ಸಾಧ್ಯವಾಗಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರಶ್ನಿಸಿದರು.</p><p>‘ದೇಶದ 20 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಗೋಮಾತೆಯ ಜಪ ಮಾಡುವ ಮುಖ್ಯಮಂತ್ರಿಯನ್ನು ಹೊಂದಿದ ಉತ್ತರಪ್ರದೇಶದಲ್ಲಿ ಗೋಮಾಂಸಕ್ಕೆ ಕಡಿವಾಣ ಬಿದ್ದಲ್ಲ. ನಾಯಿಗೆ ಪೌಷ್ಟಿಕಾಂಶಯುಕ್ತ ಆಹಾರದ ಕುರಿತು ಟೀಕೆ ಮಾಡುವ ಬಿಜೆಪಿ ನಾಯಕರು ಈ ಬಗ್ಗೆ ಮಾತನಾಡಬೇಕು’ ಎಂದು ಭಾನುವಾರ ಇಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.</p><p>‘ಖೇಲೊ ಇಂಡಿಯಾದ ಅಡಿಯಲ್ಲಿ ಗುಜರಾತಿಗೆ ₹ 600 ಕೋಟಿ ನೀಡಲಾಗಿದೆ. ಉತ್ತರಪ್ರದೇಶಕ್ಕೆ ₹ 400 ಕೋಟಿ ಹಂಚಿಕೆಯಾಗಿದೆ. ಈ ರಾಜ್ಯಗಳಲ್ಲಿ ಒಬ್ಬರೇ ಒಬ್ಬರು ಒಲಿಂಪಿಕ್ ಕ್ರೀಡಾಕೂಟದಲ್ಲಿ ಪಾಲ್ಗೊಂಡ ನಿದರ್ಶನ ಇಲ್ಲ. ಆದರೆ, ತಮಿಳುನಾಡಿಗೆ ₹ 43 ಕೋಟಿ ಮಾತ್ರ ಕೊಡಲಾಗಿದೆ. ಅತಿ ಹೆಚ್ಚು ಕ್ರೀಡಾ ಪದಕ ಗೆದ್ದ ಪಂಜಾಬ್ ಮತ್ತು ಹರಿಯಾಣಕ್ಕೆ ಕಡಿಮೆ ಅನುದಾನ ನೀಡಲಾಗಿದೆ. ಈ ತಾರತಮ್ಯ ಸಹಿಸಲು ಸಾಧ್ಯವಿಲ್ಲ’ ಎಂದು ಹೇಳಿದರು.</p><p>‘ದೇಶದಲ್ಲಿ ₹ 45 ಲಕ್ಷ ಕೋಟಿ ತೆರಿಗೆ ಸಂಗ್ರಹದ ಬೇಡಿಕೆ ಇದೆ. ಇದರಲ್ಲಿ ಶೇ 20ರಷ್ಟು ಸಾಧನೆ ಮಾಡಲು ಕೂಡ ಕೇಂದ್ರಕ್ಕೆ ಸಾಧ್ಯವಾಗಿಲ್ಲ. ಆಡಳಿತ, ಪ್ರಗತಿ ಮತ್ತು ಅಭಿವೃದ್ಧಿ ಶೂನ್ಯವಾಗಿದೆ. ಬಂಡವಾಳಶಾಹಿಗಳ ₹ 16.5 ಲಕ್ಷ ಕೋಟಿ ಸಾಲವನ್ನು ರೈಟ್ ಆಫ್ ಹೆಸರಿನಲ್ಲಿ ಮನ್ನಾ ಮಾಡಲಾಗಿದೆ. ಸಣ್ಣ ವ್ಯಾಪಾರಿ ಹಾಗೂ ರೈತರ ಸಾಲ ಮನ್ನಾ ಮಾಡುತ್ತಿಲ್ಲ. ಬೆಣ್ಣೆ ದೋಸೆಯ ಹೋಟೆಲ್ಗಳಿಗೂ ಸರಕು ಮತ್ತು ಸೇವಾ ತೆರಿಗೆಯ (ಜಿಎಸ್ಟಿ) ನೋಟಿಸ್ ನೀಡಲಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p><p>‘ಶಾಲಾ ಶುಲ್ಕ ವಿಪರೀತ ಹೆಚ್ಚಾಗಿದೆ. ಜನ ಸಾಮಾನ್ಯರು ಶಿಕ್ಷಣ ಪಡೆಯಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಶಿಕ್ಷಣದ ಶುಲ್ಕಕ್ಕೆ ಕಡಿವಾಣ ಹಾಕುವ ಅಗತ್ಯ ಇದೆ. ಈ ಕಾರ್ಯಕ್ಕೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಸಹಕಾರ ನೀಡಲಿದೆ. ಶಿಕ್ಷಣ ಮತ್ತು ಆರೋಗ್ಯ ರಾಷ್ಟ್ರೀಕರಣ ಆಗಬೇಕು ಎಂಬುದು ನನ್ನ ಅಭಿಪ್ರಾಯ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಗೋಮಾಂಸ ರಫ್ತುವಿನಲ್ಲಿ ಭಾರತವು ವಿಶ್ವದಲ್ಲೇ 2ನೇ ಸ್ಥಾನದಲ್ಲಿದೆ. ಗೋಮಾಂಸ ಉತ್ಪಾದನೆಯಲ್ಲಿ ಉತ್ತರಪ್ರದೇಶ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ನಿತ್ಯ ಬೆಳಗಾದರೆ ಗೋಮಾಂಸ ನಿಷೇಧದ ಬಗ್ಗೆ ಮಾತನಾಡುವ ಬಿಜೆಪಿಗೆ ಇದನ್ನು ತಡೆಯಲು ಈವರೆಗೆ ಏಕೆ ಸಾಧ್ಯವಾಗಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರಶ್ನಿಸಿದರು.</p><p>‘ದೇಶದ 20 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಗೋಮಾತೆಯ ಜಪ ಮಾಡುವ ಮುಖ್ಯಮಂತ್ರಿಯನ್ನು ಹೊಂದಿದ ಉತ್ತರಪ್ರದೇಶದಲ್ಲಿ ಗೋಮಾಂಸಕ್ಕೆ ಕಡಿವಾಣ ಬಿದ್ದಲ್ಲ. ನಾಯಿಗೆ ಪೌಷ್ಟಿಕಾಂಶಯುಕ್ತ ಆಹಾರದ ಕುರಿತು ಟೀಕೆ ಮಾಡುವ ಬಿಜೆಪಿ ನಾಯಕರು ಈ ಬಗ್ಗೆ ಮಾತನಾಡಬೇಕು’ ಎಂದು ಭಾನುವಾರ ಇಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.</p><p>‘ಖೇಲೊ ಇಂಡಿಯಾದ ಅಡಿಯಲ್ಲಿ ಗುಜರಾತಿಗೆ ₹ 600 ಕೋಟಿ ನೀಡಲಾಗಿದೆ. ಉತ್ತರಪ್ರದೇಶಕ್ಕೆ ₹ 400 ಕೋಟಿ ಹಂಚಿಕೆಯಾಗಿದೆ. ಈ ರಾಜ್ಯಗಳಲ್ಲಿ ಒಬ್ಬರೇ ಒಬ್ಬರು ಒಲಿಂಪಿಕ್ ಕ್ರೀಡಾಕೂಟದಲ್ಲಿ ಪಾಲ್ಗೊಂಡ ನಿದರ್ಶನ ಇಲ್ಲ. ಆದರೆ, ತಮಿಳುನಾಡಿಗೆ ₹ 43 ಕೋಟಿ ಮಾತ್ರ ಕೊಡಲಾಗಿದೆ. ಅತಿ ಹೆಚ್ಚು ಕ್ರೀಡಾ ಪದಕ ಗೆದ್ದ ಪಂಜಾಬ್ ಮತ್ತು ಹರಿಯಾಣಕ್ಕೆ ಕಡಿಮೆ ಅನುದಾನ ನೀಡಲಾಗಿದೆ. ಈ ತಾರತಮ್ಯ ಸಹಿಸಲು ಸಾಧ್ಯವಿಲ್ಲ’ ಎಂದು ಹೇಳಿದರು.</p><p>‘ದೇಶದಲ್ಲಿ ₹ 45 ಲಕ್ಷ ಕೋಟಿ ತೆರಿಗೆ ಸಂಗ್ರಹದ ಬೇಡಿಕೆ ಇದೆ. ಇದರಲ್ಲಿ ಶೇ 20ರಷ್ಟು ಸಾಧನೆ ಮಾಡಲು ಕೂಡ ಕೇಂದ್ರಕ್ಕೆ ಸಾಧ್ಯವಾಗಿಲ್ಲ. ಆಡಳಿತ, ಪ್ರಗತಿ ಮತ್ತು ಅಭಿವೃದ್ಧಿ ಶೂನ್ಯವಾಗಿದೆ. ಬಂಡವಾಳಶಾಹಿಗಳ ₹ 16.5 ಲಕ್ಷ ಕೋಟಿ ಸಾಲವನ್ನು ರೈಟ್ ಆಫ್ ಹೆಸರಿನಲ್ಲಿ ಮನ್ನಾ ಮಾಡಲಾಗಿದೆ. ಸಣ್ಣ ವ್ಯಾಪಾರಿ ಹಾಗೂ ರೈತರ ಸಾಲ ಮನ್ನಾ ಮಾಡುತ್ತಿಲ್ಲ. ಬೆಣ್ಣೆ ದೋಸೆಯ ಹೋಟೆಲ್ಗಳಿಗೂ ಸರಕು ಮತ್ತು ಸೇವಾ ತೆರಿಗೆಯ (ಜಿಎಸ್ಟಿ) ನೋಟಿಸ್ ನೀಡಲಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p><p>‘ಶಾಲಾ ಶುಲ್ಕ ವಿಪರೀತ ಹೆಚ್ಚಾಗಿದೆ. ಜನ ಸಾಮಾನ್ಯರು ಶಿಕ್ಷಣ ಪಡೆಯಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಶಿಕ್ಷಣದ ಶುಲ್ಕಕ್ಕೆ ಕಡಿವಾಣ ಹಾಕುವ ಅಗತ್ಯ ಇದೆ. ಈ ಕಾರ್ಯಕ್ಕೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಸಹಕಾರ ನೀಡಲಿದೆ. ಶಿಕ್ಷಣ ಮತ್ತು ಆರೋಗ್ಯ ರಾಷ್ಟ್ರೀಕರಣ ಆಗಬೇಕು ಎಂಬುದು ನನ್ನ ಅಭಿಪ್ರಾಯ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>