<p><strong>ಹೊನ್ನಾಳಿ:</strong> ‘2028ರಲ್ಲಿ ಬಿಜೆಪಿ ಸರ್ಕಾರ ರಚನೆಗೆ ಬೇಕಾದ ಎಲ್ಲಾ ಪ್ರಯತ್ನಗಳನ್ನು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ನಮ್ಮ ಕಾರ್ಯಕರ್ತರು ಮಾಡಬೇಕು’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸಲಹೆ ನೀಡಿದರು.</p>.<p>ಶನಿವಾರ ಪಟ್ಟಣದ ಮೋಹನ್ ಎನ್ಕ್ಲೈವ್ ಸಭಾಂಗಣದಲ್ಲಿ ಬಿಜೆಪಿ ತಾಲ್ಲೂಕು ಘಟಕದಿಂದ ಆಯೋಜಿಸಿದ್ದ ಸಾಮಾಜಿಕ ಜಾಲತಾಣ ಕಾರ್ಯಾಗಾರವನ್ನು ಶಿವಮೊಗ್ಗ ವಿಭಾಗದ ಸಾಮಾಜಿಕ ಜಾಲತಾಣದ ಸಂಪನ್ಮೂಲ ವ್ಯಕ್ತಿ ಪಂಡಿತ್ ಪ್ರಶಾಂತ್ ಅವರೊಂದಿಗೆ ಉದ್ಘಾಟಿಸಿ ಮಾತನಾಡಿದರು.</p>.<p>ಕಾಲ ಕಾಲಕ್ಕೆ ಪ್ರಚಾರ ಮಾಧ್ಯಮಗಳು ಬದಲಾಗುತ್ತಿದ್ದು, ಅದಕ್ಕೆ ತಕ್ಕಂತೆ ನಾವೂ ಕೂಡಾ ಬದಲಾಗಬೇಕಾಗಿದೆ, ಇದೀಗ ಸಾಮಾಜಿಕ ಮಾಧ್ಯಮ, ಕೃತಕ ಬುದ್ಧಿ ಮತ್ತೆ (ಎ.ಐ) ನಮೋ ಮತ್ತು ಸರಳ ಆ್ಯಪ್ಗಳ ಮೂಲಕ ಪ್ರತಿಯೊಬ್ಬರನ್ನು ತಲುಪಬೇಕಾಗಿದೆ ಎಂದು ಹೇಳಿದರು.</p>.<p>‘ದೇಶದಲ್ಲಿ ಚುನಾವಣಾ ಆಯೋಗ ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಸುಳ್ಳು ಮತದಾರರನ್ನು ತೆಗೆದುಹಾಕುವ ಮೂಲಕ ನಿಜವಾದ ಮತದಾರರನ್ನು ಉಳಿಸುವ ಕೆಲಸ ಮಾಡುತ್ತಿದೆ. ಕಾರ್ಯಕರ್ತರು ಸುಳ್ಳು ಮತದಾರರನ್ನು ಗುರುತಿಸಿ ತೆಗೆದು ಹಾಕಿಸುವ ಕೆಲಸ ಮಾಡಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ಅವಳಿ ತಾಲ್ಲೂಕುಗಳಲ್ಲಿ ನಡೆಯುವ ವಿಎಸ್ಎಸ್ಎನ್ ಸೇರಿದಂತೆ ಅನೇಕ ಸ್ಥಳೀಯ ಚುನಾವಣೆಗಳತ್ತ ಗಮನಹರಿಸಬೇಕು, ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ಹಿಡಿಯಬೇಕು, ತಳಮಟ್ಟದಲ್ಲಿ ಅಧಿಕಾರ ಹಿಡಿದರೆ ರಾಜ್ಯ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಕಷ್ಟವಾಗುವುದಿಲ್ಲ’ ಎಂದರು.</p>.<p>‘ಸಾಮಾಜಿಕ ಜಾಲತಾಣದಲ್ಲಿ ವೈಯಕ್ತಿಕ ವಿಷಯಗಳನ್ನು ಹಾಕದೇ ಪಕ್ಷದ ಸಾಧನೆಗಳನ್ನು ಮಾತ್ರ ಹಾಕುವ ಮೂಲಕ ಜನಮನ್ನಣೆ ಗಳಿಸಬೇಕು’ ಎಂದರು.</p>.<p>‘ಮೇ 31ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ ‘ಮನ್ ಕಿ ಬಾತ್’ ಕಾರ್ಯಕ್ರಮವನ್ನು ಕಾರ್ಯಕರ್ತರು ತಪ್ಪದೇ ವೀಕ್ಷಿಸಬೇಕು’ ಎಂದು ಮನವಿ ಮಾಡಿದರು.</p>.<p>ಕಾರ್ಯಾಗಾರದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ಪಿ. ಕುಬೇಂದ್ರಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ಅರಕೆರೆ ನಾಗರಾಜ್, ಮಾಜಿ ಅಧ್ಯಕ್ಷ ಜೆ.ಕೆ. ಸುರೇಶ್, ಎಸ್.ಎಸ್. ಬೀರಪ್ಪ, ಮಾದೇನಹಳ್ಳಿ ನಾಗರಾಜ್, ರಂಗನಾಥ್, ಮಾರುತಿನಾಯ್ಕ, ಶಿವಾನಂದ್, ನೆಲಹೊನ್ನೆ ಮಂಜುನಾಥ್ ಹಾಗೂ ಇತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-43-2047266939</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ:</strong> ‘2028ರಲ್ಲಿ ಬಿಜೆಪಿ ಸರ್ಕಾರ ರಚನೆಗೆ ಬೇಕಾದ ಎಲ್ಲಾ ಪ್ರಯತ್ನಗಳನ್ನು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ನಮ್ಮ ಕಾರ್ಯಕರ್ತರು ಮಾಡಬೇಕು’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸಲಹೆ ನೀಡಿದರು.</p>.<p>ಶನಿವಾರ ಪಟ್ಟಣದ ಮೋಹನ್ ಎನ್ಕ್ಲೈವ್ ಸಭಾಂಗಣದಲ್ಲಿ ಬಿಜೆಪಿ ತಾಲ್ಲೂಕು ಘಟಕದಿಂದ ಆಯೋಜಿಸಿದ್ದ ಸಾಮಾಜಿಕ ಜಾಲತಾಣ ಕಾರ್ಯಾಗಾರವನ್ನು ಶಿವಮೊಗ್ಗ ವಿಭಾಗದ ಸಾಮಾಜಿಕ ಜಾಲತಾಣದ ಸಂಪನ್ಮೂಲ ವ್ಯಕ್ತಿ ಪಂಡಿತ್ ಪ್ರಶಾಂತ್ ಅವರೊಂದಿಗೆ ಉದ್ಘಾಟಿಸಿ ಮಾತನಾಡಿದರು.</p>.<p>ಕಾಲ ಕಾಲಕ್ಕೆ ಪ್ರಚಾರ ಮಾಧ್ಯಮಗಳು ಬದಲಾಗುತ್ತಿದ್ದು, ಅದಕ್ಕೆ ತಕ್ಕಂತೆ ನಾವೂ ಕೂಡಾ ಬದಲಾಗಬೇಕಾಗಿದೆ, ಇದೀಗ ಸಾಮಾಜಿಕ ಮಾಧ್ಯಮ, ಕೃತಕ ಬುದ್ಧಿ ಮತ್ತೆ (ಎ.ಐ) ನಮೋ ಮತ್ತು ಸರಳ ಆ್ಯಪ್ಗಳ ಮೂಲಕ ಪ್ರತಿಯೊಬ್ಬರನ್ನು ತಲುಪಬೇಕಾಗಿದೆ ಎಂದು ಹೇಳಿದರು.</p>.<p>‘ದೇಶದಲ್ಲಿ ಚುನಾವಣಾ ಆಯೋಗ ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಸುಳ್ಳು ಮತದಾರರನ್ನು ತೆಗೆದುಹಾಕುವ ಮೂಲಕ ನಿಜವಾದ ಮತದಾರರನ್ನು ಉಳಿಸುವ ಕೆಲಸ ಮಾಡುತ್ತಿದೆ. ಕಾರ್ಯಕರ್ತರು ಸುಳ್ಳು ಮತದಾರರನ್ನು ಗುರುತಿಸಿ ತೆಗೆದು ಹಾಕಿಸುವ ಕೆಲಸ ಮಾಡಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ಅವಳಿ ತಾಲ್ಲೂಕುಗಳಲ್ಲಿ ನಡೆಯುವ ವಿಎಸ್ಎಸ್ಎನ್ ಸೇರಿದಂತೆ ಅನೇಕ ಸ್ಥಳೀಯ ಚುನಾವಣೆಗಳತ್ತ ಗಮನಹರಿಸಬೇಕು, ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ಹಿಡಿಯಬೇಕು, ತಳಮಟ್ಟದಲ್ಲಿ ಅಧಿಕಾರ ಹಿಡಿದರೆ ರಾಜ್ಯ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಕಷ್ಟವಾಗುವುದಿಲ್ಲ’ ಎಂದರು.</p>.<p>‘ಸಾಮಾಜಿಕ ಜಾಲತಾಣದಲ್ಲಿ ವೈಯಕ್ತಿಕ ವಿಷಯಗಳನ್ನು ಹಾಕದೇ ಪಕ್ಷದ ಸಾಧನೆಗಳನ್ನು ಮಾತ್ರ ಹಾಕುವ ಮೂಲಕ ಜನಮನ್ನಣೆ ಗಳಿಸಬೇಕು’ ಎಂದರು.</p>.<p>‘ಮೇ 31ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ ‘ಮನ್ ಕಿ ಬಾತ್’ ಕಾರ್ಯಕ್ರಮವನ್ನು ಕಾರ್ಯಕರ್ತರು ತಪ್ಪದೇ ವೀಕ್ಷಿಸಬೇಕು’ ಎಂದು ಮನವಿ ಮಾಡಿದರು.</p>.<p>ಕಾರ್ಯಾಗಾರದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ಪಿ. ಕುಬೇಂದ್ರಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ಅರಕೆರೆ ನಾಗರಾಜ್, ಮಾಜಿ ಅಧ್ಯಕ್ಷ ಜೆ.ಕೆ. ಸುರೇಶ್, ಎಸ್.ಎಸ್. ಬೀರಪ್ಪ, ಮಾದೇನಹಳ್ಳಿ ನಾಗರಾಜ್, ರಂಗನಾಥ್, ಮಾರುತಿನಾಯ್ಕ, ಶಿವಾನಂದ್, ನೆಲಹೊನ್ನೆ ಮಂಜುನಾಥ್ ಹಾಗೂ ಇತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-43-2047266939</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>