ವಿಧಾನ ಪರಿಷತ್ನಲ್ಲಿ ನಡೆದ ಘಟನೆ ದೇಶದ ಸಂಸದೀಯ ಪ್ರಜಾಪ್ರಭುತ್ವ ಇತಿಹಾಸದ ಕಪ್ಪು ಚುಕ್ಕೆ. ಅಂದಿನ ಕಲಾಪದ ಬೆಲ್ ಆಗುತ್ತಿರುವಾಗ, ಸಭಾಪತಿ ಪೀಠಕ್ಕೆ ಬಾರದಂತೆ ತಡೆಯಲು ಬಾಗಿಲಿಗೆ ಬೀಗ ಹಾಕಿದ ಬಿಜೆಪಿಯು ಸಭಾಪತಿಯವರ ಅನುಮತಿ ಇಲ್ಲದೆ ಉಪಸಭಾಪತಿಯನ್ನು ಪೀಠದ ಮೇಲೆ ಕೂರಿಸಿ ಕಲಾಪ ನಡೆಸಲು ಹೊರಟಿರುವುದೇ ಕೋಲಾಹಲಕ್ಕೆ ಕಾರಣವಾಯಿತು. ಬಿಜೆಪಿ ಸದಸ್ಯರು ಹಾಡುಹಗಲೇ ಸಂವಿಧಾನಕ್ಕೆ ಅಪಚಾರವೆಸಗಿದರೂ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು, ಸಚಿವರು ಆ ಘಟನೆಯನ್ನು ಸಮರ್ಥಿಸಿಕೊಳ್ಳುತ್ತಿರುವುದು ಖಂಡನೀಯ ಎಂದು ಟೀಕಿಸಿದ್ದಾರೆ.