ಕೋಟೇಶ್ವರ ಸಮೀಪದ ಗೋಪಾಡಿ ಗ್ರಾಮದ ಪಡುಗೋಪಾಡಿಯ ಇಂದಿರಾ ಮನೆಯಲ್ಲಿದ್ದ ಸಮಯ ನೋಡಿ ನೀರು ಕೇಳುವ ನೆಪದಲ್ಲಿ ಮನೆಗೆ ಬಂದಿದ್ದ ಆರೋಪಿ, ಆಕೆಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ್ದ. ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಆತನ ಬಂಧನವಾಗಿತ್ತು. ಸಾಕ್ಷಿಗಳನ್ನು ನಾಶ ಮಾಡುವ ಸಂಬಂಧ ಆರೋಪಿ ಹಲವಾರು ಕತೆ ಕಟ್ಟಿದ್ದ. ಆರೋಪಿಗೆ ಶಿಕ್ಷೆ ನೀಡುವಂತೆ ಆ ವೇಳೆ ಪ್ರತಿಭಟನೆಗಳು ನಡೆದಿದ್ದವು. ಅಪಹರಣ, ಅತ್ಯಾಚಾರ ಆರೋಪಗಳಿಗೆ ತಲಾ 10 ವರ್ಷಗಳ ಕಠಿಣ ಶಿಕ್ಷೆ. ಭ್ರೂಣ ಹತ್ಯೆ ನಡೆಸಿದ್ದಕ್ಕಾಗಿ ಗಲ್ಲು ಶಿಕ್ಷೆ ವಿಧಿಸಲಾಯಿತು.