ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗರ್ಭಿಣಿ ಕೊಲೆ: ಅಪರಾಧಿಗೆ ಗಲ್ಲು

ವಿಶೇಷ ಜಿಲ್ಲಾ ಸೆಷನ್ಸ್‌ ನ್ಯಾಯಾಲಯದಿಂದ ಆದೇಶ
Last Updated 20 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಕುಂದಾಪುರ: 2015ರಲ್ಲಿ ನಡೆದಿದ್ದ ಪಡುಗೋಪಾಡಿ ಗರ್ಭಿಣಿ ಕೊಲೆ ಪ್ರಕರಣದ ಆರೋಪಿ ಪ್ರಶಾಂತ ಮೊಗವೀರ ಎಂಬಾತನಿಗೆ ವಿಶೇಷ ಜಿಲ್ಲಾ ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಪ್ರಕಾಶ ಖಂಡೇರಿ ಗಲ್ಲು ಶಿಕ್ಷೆ ವಿಧಿಸಿ ಮಂಗಳವಾರ ಆದೇಶ ನೀಡಿದ್ದಾರೆ.

ಕೋಟೇಶ್ವರ ಸಮೀಪದ ಗೋಪಾಡಿ ಗ್ರಾಮದ ಪಡುಗೋಪಾಡಿಯ ಇಂದಿರಾ ಮನೆಯಲ್ಲಿದ್ದ ಸಮಯ ನೋಡಿ ನೀರು ಕೇಳುವ ನೆಪದಲ್ಲಿ ಮನೆಗೆ ಬಂದಿದ್ದ ಆರೋಪಿ, ಆಕೆಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ್ದ. ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಆತನ ಬಂಧನವಾಗಿತ್ತು. ಸಾಕ್ಷಿಗಳನ್ನು ನಾಶ ಮಾಡುವ ಸಂಬಂಧ ಆರೋಪಿ ಹಲವಾರು ಕತೆ ಕಟ್ಟಿದ್ದ. ಆರೋಪಿಗೆ ಶಿಕ್ಷೆ ನೀಡುವಂತೆ ಆ ವೇಳೆ ಪ್ರತಿಭಟನೆಗಳು ನಡೆದಿದ್ದವು. ಅಪಹರಣ, ಅತ್ಯಾಚಾರ ಆರೋಪಗಳಿಗೆ ತಲಾ 10 ವರ್ಷಗಳ ಕಠಿಣ ಶಿಕ್ಷೆ. ಭ್ರೂಣ ಹತ್ಯೆ ನಡೆಸಿದ್ದಕ್ಕಾಗಿ ಗಲ್ಲು ಶಿಕ್ಷೆ ವಿಧಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT