ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿಗಾಗಿ 23ರಂದು ರಕ್ತದಾನ ಮಾಡಿ ಚಳವಳಿ

Last Updated 20 ಡಿಸೆಂಬರ್ 2020, 4:57 IST
ಅಕ್ಷರ ಗಾತ್ರ

ದಾವಣಗೆರೆ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಜನ್ಮದಿನದ ಅಂಗವಾಗಿ ಡಿಸೆಂಬರ್ 23 ರಂದು ರಾಜ್ಯದಾದ್ಯಂತ ‘ಕೊಡುತ್ತೇವೆ ರಕ್ತವನ್ನು, ಪಡೆಯುತ್ತೇವೆ ಮೀಸಲಾತಿಯನ್ನು’ ಎಂಬ ಚಳವಳಿ ಹಮ್ಮಿಕೊಳ್ಳಲಾಗಿದೆ.

ಡಿ.22 ರಂದು ಬೆಳಿಗ್ಗೆ 10ಕ್ಕೆ ನಗರದ ಸದ್ಯೋಜಾತ ಮಠದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಸಮಾಜದವರು ಸ್ಥಳೀಯ ಆಸ್ಪತ್ರೆಗಳಲ್ಲಿ ರಕ್ತದಾನ ಮಾಡುವ ಮೂಲಕ ಕಿಚ್ಚನ್ನು ವ್ಯಕ್ತಪಡಿಸಬೇಕು. ರಕ್ತದಾನದ ಮಾಡಿದ ಫೋಟೊವನ್ನು ವಾಟ್ಸ್‌ ಆ್ಯಪ್‌ ಗ್ರೂಪ್‌ಗಳಲ್ಲಿ ಶೇರ್ ಮಾಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಾಹಿತಿಗೆ ಪ್ರಭು ಕಲ್ಬುರ್ಗಿ ಮೊ: 8722209719, ಒಣರೊಟ್ಟಿ ಮಹಾಂತೇಶ್ ಮೊ: 7353674904 ಅವರನ್ನು ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT