<p><strong>ಚನ್ನಗಿರಿ: </strong>ತಾಲ್ಲೂಕಿನ ರಾಜಗೊಂಡನಹಳ್ಳಿಯಲ್ಲಿ ಬೊಲೆರೊ ಪಿಕಪ್ ವಾಹನ ಮತ್ತು ಬೈಕ್ ನಡುವೆ ಗುರುವಾರ ಅಪಘಾತ ಉಂಟಾಗಿ ಮೂವರು ಮೃತಪಟ್ಟಿದ್ದಾರೆ.</p>.<p>ತಾಲ್ಲೂಕಿನ ಮಲ್ಲೇಶ್ವರ ಗ್ರಾಮದ ಅಜ್ಜಯ್ಯ(19), ಮಂಜು(18) ಹಾಗೂ ದೇವರಾಜ್(19) ಮೃತ ಪಟ್ಟ ಯುವಕರು.</p>.<p>ಬೊಲೆರೊ ಪಿಕಪ್ ವಾಹನ ಬೀರೂರು ಕಡೆಯಿಂದ ಚನ್ನಗಿರಿಗೆ ಹಾಗೂ ಬೈಕ್ ಸವಾರರು ಚನ್ನಗಿರಿಯಿಂದ ಮಲ್ಲೇಶ್ವರ ಗ್ರಾಮಕ್ಕೆ ಬರುತ್ತಿದ್ದಾಗ ಈ ಅಪಘಾತ ಉಂಟಾಗಿದೆ.</p>.<p>ಅಜ್ಜಯ್ಯ ಸ್ಥಳದಲ್ಲೇ ಮೃತಪಟ್ಟರೆ, ಮಂಜು ಹಾಗೂ ದೇವರಾಜ್ ಆಸ್ಪತ್ರೆಯಲ್ಲಿ ನಿಧನರಾದರು. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದರು. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಲಾರಿ ಡಿಕ್ಕಿಯಾಗಿ ವಿದ್ಯುತ್ ಕಂಬಕ್ಕೆ ಹಾನಿ: ಅಪಾಯ ತಪ್ಪಿಸಿದ ಪೊಲೀಸರು</strong></p>.<p><strong>ದಾವಣಗೆರೆ: </strong>ಹರಿಹರ-ಶಿವಮೊಗ್ಗ ರಸ್ತೆಯ ಯಕ್ಕೆಗೊಂದಿ ಚೌಡೇಶ್ವರಿ ದೇವಸ್ಥಾನದ ಬಳಿ ಗುರುವಾರ ಮುಂಜಾನೆ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿಯಾಗಿ ಎರಡು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿ ಬಿದ್ದಿದ್ದವು. ವಿದ್ಯುತ್ ತಂತಿ ರಸ್ತೆ ಮೇಲಿದ್ದವು. ಇದರಿಂದ ಇನ್ನಷ್ಟು ಅಪಾಯ ಆಗುವುದನ್ನು ಪೊಲೀಸರು ತಪ್ಪಿಸಿದ್ದಾರೆ.</p>.<p>ಲಾರಿ ಡಿಕ್ಕಿಯಾದ ಬಗ್ಗೆ 112ಗೆ ಮಾಹಿತಿ ಬಂದಿತ್ತು. 112 ಇಆರ್ವಿ ಪೊಲೀಸರು ಸ್ಥಳಕ್ಕೆ ಹೋಗಿದ್ದಲ್ಲದೇ ಬೆಸ್ಕಾಂ ಸಿಬ್ಬಂದಿಯನ್ನು ಕರೆಸಿ ವಿದ್ಯುತ್ ತಂತಿಗಳನ್ನು ತೆರವುಗೊಳಿಸಿದರು. ವಾಹನಗಳ ಸಂಚಾರ ಸುಗಮಗೊಳಿಸಿದರು. ಬಳಿಕ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ: </strong>ತಾಲ್ಲೂಕಿನ ರಾಜಗೊಂಡನಹಳ್ಳಿಯಲ್ಲಿ ಬೊಲೆರೊ ಪಿಕಪ್ ವಾಹನ ಮತ್ತು ಬೈಕ್ ನಡುವೆ ಗುರುವಾರ ಅಪಘಾತ ಉಂಟಾಗಿ ಮೂವರು ಮೃತಪಟ್ಟಿದ್ದಾರೆ.</p>.<p>ತಾಲ್ಲೂಕಿನ ಮಲ್ಲೇಶ್ವರ ಗ್ರಾಮದ ಅಜ್ಜಯ್ಯ(19), ಮಂಜು(18) ಹಾಗೂ ದೇವರಾಜ್(19) ಮೃತ ಪಟ್ಟ ಯುವಕರು.</p>.<p>ಬೊಲೆರೊ ಪಿಕಪ್ ವಾಹನ ಬೀರೂರು ಕಡೆಯಿಂದ ಚನ್ನಗಿರಿಗೆ ಹಾಗೂ ಬೈಕ್ ಸವಾರರು ಚನ್ನಗಿರಿಯಿಂದ ಮಲ್ಲೇಶ್ವರ ಗ್ರಾಮಕ್ಕೆ ಬರುತ್ತಿದ್ದಾಗ ಈ ಅಪಘಾತ ಉಂಟಾಗಿದೆ.</p>.<p>ಅಜ್ಜಯ್ಯ ಸ್ಥಳದಲ್ಲೇ ಮೃತಪಟ್ಟರೆ, ಮಂಜು ಹಾಗೂ ದೇವರಾಜ್ ಆಸ್ಪತ್ರೆಯಲ್ಲಿ ನಿಧನರಾದರು. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದರು. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಲಾರಿ ಡಿಕ್ಕಿಯಾಗಿ ವಿದ್ಯುತ್ ಕಂಬಕ್ಕೆ ಹಾನಿ: ಅಪಾಯ ತಪ್ಪಿಸಿದ ಪೊಲೀಸರು</strong></p>.<p><strong>ದಾವಣಗೆರೆ: </strong>ಹರಿಹರ-ಶಿವಮೊಗ್ಗ ರಸ್ತೆಯ ಯಕ್ಕೆಗೊಂದಿ ಚೌಡೇಶ್ವರಿ ದೇವಸ್ಥಾನದ ಬಳಿ ಗುರುವಾರ ಮುಂಜಾನೆ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿಯಾಗಿ ಎರಡು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿ ಬಿದ್ದಿದ್ದವು. ವಿದ್ಯುತ್ ತಂತಿ ರಸ್ತೆ ಮೇಲಿದ್ದವು. ಇದರಿಂದ ಇನ್ನಷ್ಟು ಅಪಾಯ ಆಗುವುದನ್ನು ಪೊಲೀಸರು ತಪ್ಪಿಸಿದ್ದಾರೆ.</p>.<p>ಲಾರಿ ಡಿಕ್ಕಿಯಾದ ಬಗ್ಗೆ 112ಗೆ ಮಾಹಿತಿ ಬಂದಿತ್ತು. 112 ಇಆರ್ವಿ ಪೊಲೀಸರು ಸ್ಥಳಕ್ಕೆ ಹೋಗಿದ್ದಲ್ಲದೇ ಬೆಸ್ಕಾಂ ಸಿಬ್ಬಂದಿಯನ್ನು ಕರೆಸಿ ವಿದ್ಯುತ್ ತಂತಿಗಳನ್ನು ತೆರವುಗೊಳಿಸಿದರು. ವಾಹನಗಳ ಸಂಚಾರ ಸುಗಮಗೊಳಿಸಿದರು. ಬಳಿಕ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>