<p>ದಾವಣಗೆರೆ: ‘ಬಿಜೆಪಿಯವರು ರಾಮೇಶ್ವರ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣವನ್ನು ಚುನಾವಣಾ ವಿಷಯವನ್ನಾಗಿ ಬಳಸಿದ್ದೇ ಆದರೆ, ನಾವು ಕೂಡ ಅವರ ಕಾಲಾವಧಿಯಲ್ಲಿ ನಡೆದ 6 ಬಾಂಬ್ ಸ್ಫೋಟ ಪ್ರಕರಣಗಳನ್ನು ಚುನಾವಣಾ ಅಸ್ತ್ರವನ್ನಾಗಿ ಬಳಸುತ್ತೇವೆ’ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.</p>.<p>‘ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ, ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ನಡೆದಿತ್ತು. ಸರಣಿ ಬಾಂಬ್ ಸ್ಫೋಟವೂ ಸಂಭವಿಸಿತ್ತು. ಈ ವಿಚಾರಗಳನ್ನು ನಾವೂ ಜನರ ಮುಂದಿಡುತ್ತೇವೆ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು. </p>.<p>‘ಪ್ರಪಂಚ ಇರೋವರೆಗೂ ಅಪರಾಧ ಚಟುವಟಿಕೆಗಳು ನಡೆಯುತ್ತಲೇ ಇರುತ್ತವೆ. ಬಿಜೆಪಿ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿತ್ತು. ನಾವು ಬಂದ ಮೇಲೆ ಸುಧಾರಣೆಯಾಗಿದೆ. ಬಿಜೆಪಿಯವರು ಒಂದು ವರ್ಷದ ಅವಧಿಗೆ ಸಬ್ ಇನ್ಸ್ಪೆಕ್ಟರ್, ಇನ್ಸ್ಪೆಕ್ಟರ್ಗಳ ವರ್ಗಾವಣೆ ಮಾಡುತ್ತಿದ್ದರು. ನಾವು ಎರಡು ವರ್ಷಗಳಿಗೊಮ್ಮೆ ಮಾಡುತ್ತೇವೆ’ ಎಂದರು.</p>.<p>‘ಲೋಕಸಭೆ ಚುನಾವಣೆಗೆ ವಿವಿಧ ಕ್ಷೇತ್ರಗಳಲ್ಲಿ ಸ್ಪರ್ಧೆ ಜಾಸ್ತಿ ಇರುವುದರಿಂದ ಕಗ್ಗಂಟಾಗಿದ್ದು, ಕಾಂಗ್ರೆಸ್ ಎರಡನೇ ಪಟ್ಟಿ ಮಾರ್ಚ್ 11ರ ನಂತರ ಬಿಡುಗಡೆಯಾಗಲಿದೆ. ಕಾಂಗ್ರೆಸ್ನಲ್ಲಿ ಯಾವುದೇ ಭಿನ್ನಮತವಿಲ್ಲ. ದಾವಣಗೆರೆಯಲ್ಲಿ ಯಜಮಾನರು (ಎಸ್.ಎಸ್.ಮಲ್ಲಿಕಾರ್ಜುನ್ ಹಾಗೂ ಶಾಮನೂರು ಶಿವಶಂಕರಪ್ಪ) ಯಾರಿಗೆ ಹೇಳುತ್ತಾರೆ ಅವರಿಗೆ ಟಿಕೆಟ್ ಸಿಗುತ್ತದೆ’ ಎಂದರು.</p>.<p>10 ವರ್ಷಗಳು ನಮ್ಮ ಸರ್ಕಾರ ಇರುತ್ತದೆ. ಅಲ್ಲಿಯವರೆಗೂ ಗ್ಯಾರಂಟಿ ಮುಂದುವರೆಯುತ್ತದೆ. ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಏಕೆಂದರೆ ಅವರು ಉದ್ದಿಮೆಗಳ ಪರ ಅಲ್ವಾ ಅದಕ್ಕೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ‘ಬಿಜೆಪಿಯವರು ರಾಮೇಶ್ವರ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣವನ್ನು ಚುನಾವಣಾ ವಿಷಯವನ್ನಾಗಿ ಬಳಸಿದ್ದೇ ಆದರೆ, ನಾವು ಕೂಡ ಅವರ ಕಾಲಾವಧಿಯಲ್ಲಿ ನಡೆದ 6 ಬಾಂಬ್ ಸ್ಫೋಟ ಪ್ರಕರಣಗಳನ್ನು ಚುನಾವಣಾ ಅಸ್ತ್ರವನ್ನಾಗಿ ಬಳಸುತ್ತೇವೆ’ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.</p>.<p>‘ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ, ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ನಡೆದಿತ್ತು. ಸರಣಿ ಬಾಂಬ್ ಸ್ಫೋಟವೂ ಸಂಭವಿಸಿತ್ತು. ಈ ವಿಚಾರಗಳನ್ನು ನಾವೂ ಜನರ ಮುಂದಿಡುತ್ತೇವೆ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು. </p>.<p>‘ಪ್ರಪಂಚ ಇರೋವರೆಗೂ ಅಪರಾಧ ಚಟುವಟಿಕೆಗಳು ನಡೆಯುತ್ತಲೇ ಇರುತ್ತವೆ. ಬಿಜೆಪಿ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿತ್ತು. ನಾವು ಬಂದ ಮೇಲೆ ಸುಧಾರಣೆಯಾಗಿದೆ. ಬಿಜೆಪಿಯವರು ಒಂದು ವರ್ಷದ ಅವಧಿಗೆ ಸಬ್ ಇನ್ಸ್ಪೆಕ್ಟರ್, ಇನ್ಸ್ಪೆಕ್ಟರ್ಗಳ ವರ್ಗಾವಣೆ ಮಾಡುತ್ತಿದ್ದರು. ನಾವು ಎರಡು ವರ್ಷಗಳಿಗೊಮ್ಮೆ ಮಾಡುತ್ತೇವೆ’ ಎಂದರು.</p>.<p>‘ಲೋಕಸಭೆ ಚುನಾವಣೆಗೆ ವಿವಿಧ ಕ್ಷೇತ್ರಗಳಲ್ಲಿ ಸ್ಪರ್ಧೆ ಜಾಸ್ತಿ ಇರುವುದರಿಂದ ಕಗ್ಗಂಟಾಗಿದ್ದು, ಕಾಂಗ್ರೆಸ್ ಎರಡನೇ ಪಟ್ಟಿ ಮಾರ್ಚ್ 11ರ ನಂತರ ಬಿಡುಗಡೆಯಾಗಲಿದೆ. ಕಾಂಗ್ರೆಸ್ನಲ್ಲಿ ಯಾವುದೇ ಭಿನ್ನಮತವಿಲ್ಲ. ದಾವಣಗೆರೆಯಲ್ಲಿ ಯಜಮಾನರು (ಎಸ್.ಎಸ್.ಮಲ್ಲಿಕಾರ್ಜುನ್ ಹಾಗೂ ಶಾಮನೂರು ಶಿವಶಂಕರಪ್ಪ) ಯಾರಿಗೆ ಹೇಳುತ್ತಾರೆ ಅವರಿಗೆ ಟಿಕೆಟ್ ಸಿಗುತ್ತದೆ’ ಎಂದರು.</p>.<p>10 ವರ್ಷಗಳು ನಮ್ಮ ಸರ್ಕಾರ ಇರುತ್ತದೆ. ಅಲ್ಲಿಯವರೆಗೂ ಗ್ಯಾರಂಟಿ ಮುಂದುವರೆಯುತ್ತದೆ. ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಏಕೆಂದರೆ ಅವರು ಉದ್ದಿಮೆಗಳ ಪರ ಅಲ್ವಾ ಅದಕ್ಕೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>