ಕುಮಾರಸ್ವಾಮಿ ಅವರು, ‘ರಸ್ತೆ ನಿರ್ಮಿಸುವ ಬಗ್ಗೆ ಎಪಿಎಂಸಿ ಕಾರ್ಯದರ್ಶಿ ಜೊತೆ ಈಗಾಗಲೇ ಚರ್ಚಿಸಿದ್ದೇನೆ. ಚುನಾವಣೆ ಮುಗಿದ ವಾರದೊಳಗೆ ಗ್ರಾಮಕ್ಕೆ ಬಂದು ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು. ಕಂದಾಯ, ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳೊಂದಿಗೆ ಒಂದು ತಿಂಗಳ ಒಳಗೆ ಗ್ರಾಮಕ್ಕೆ ಬಂದು ಜನಸ್ಪಂದನ ಸಭೆ ನಡೆಸಿ, ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.