<p>ಬಸವಾಪಟ್ಟಣ: ‘ಘೋಷಣೆಗಳಿಂದ ಮಾತ್ರ ಪರಿಸರ ರಕ್ಷಣೆ ಅಸಾಧ್ಯ. ಈ ಭಾವನೆ ಮಕ್ಕಳಲ್ಲಿ ಬಾಲ್ಯದಿಂದಲೇ ಬೆಳೆಯಬೇಕು’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಆರ್.ಹಾಲೇಶ್ ಹೇಳಿದರು.</p>.<p>ಗುರುವಾರ ಇಲ್ಲಿನ ರಾಘವೇಂದ್ರ ಮತ್ತು ಜನತಾ ಪ್ರೌಢಶಾಲೆಗಳಲ್ಲಿ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ವತಿಯಿಂದ ನಡೆದ ವಿಶ್ವ ಪರಿಸರ ದಿನದ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಾನವನಿಂದ ನಿತ್ಯ ನಡೆಯುತ್ತಿರುವ ದೌರ್ಜನ್ಯದಿಂದ ಪರಿಸರದ ಮೇಲೆ ತೀವ್ರ ದುಷ್ಪರಿಣಾಮ ಉಂಟಾಗುತ್ತಿದೆ. ರೋಗಗಳು ಹೆಚ್ಚಾಗುತ್ತಿವೆ. ಗಾಳಿ, ನೀರು, ಭೂಮಿ ಕಲುಷಿತಗೊಳ್ಳುತ್ತಿವೆ. ಇದನ್ನು ತಡೆಯಲು ಮಕ್ಕಳಿಗೆ ಬಾಲ್ಯದಿಂದಲೇ ತರಬೇತಿ ನೀಡಬೇಕು’ ಎಂದು ಹೇಳಿದರು.</p>.<p>ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನಾಧಿಕಾರಿ ಬಾಲಕೃಷ್ಣ ಮಾತನಾಡಿದರು. ವಿದ್ಯಾರ್ಥಿಗಳಿಂದ ಗ್ರಾಮದಲ್ಲಿ ಪರಿಸರ ಜಾಗೃತಿ ಜಾಥಾ ನಡೆಯಿತು. ಜನತಾ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೆ.ಜಿ.ಮಂಜುನಾಥ ಸ್ವಾಮಿ, ಮುಖ್ಯ ಶಿಕ್ಷಕರಾದ ಕೆ.ಶಾಂತರಾಜ್, ಹರಿಹರ ಪಟಗಾರ, ಅಧ್ಯಾಪಕ ವರ್ಗ, ಮೇಲ್ವಿಚಾರಕರಾದ ದುರ್ಗಾಭವಾನಿ, ಶಂಭುಲಿಂಗಯ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಸವಾಪಟ್ಟಣ: ‘ಘೋಷಣೆಗಳಿಂದ ಮಾತ್ರ ಪರಿಸರ ರಕ್ಷಣೆ ಅಸಾಧ್ಯ. ಈ ಭಾವನೆ ಮಕ್ಕಳಲ್ಲಿ ಬಾಲ್ಯದಿಂದಲೇ ಬೆಳೆಯಬೇಕು’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಆರ್.ಹಾಲೇಶ್ ಹೇಳಿದರು.</p>.<p>ಗುರುವಾರ ಇಲ್ಲಿನ ರಾಘವೇಂದ್ರ ಮತ್ತು ಜನತಾ ಪ್ರೌಢಶಾಲೆಗಳಲ್ಲಿ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ವತಿಯಿಂದ ನಡೆದ ವಿಶ್ವ ಪರಿಸರ ದಿನದ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಾನವನಿಂದ ನಿತ್ಯ ನಡೆಯುತ್ತಿರುವ ದೌರ್ಜನ್ಯದಿಂದ ಪರಿಸರದ ಮೇಲೆ ತೀವ್ರ ದುಷ್ಪರಿಣಾಮ ಉಂಟಾಗುತ್ತಿದೆ. ರೋಗಗಳು ಹೆಚ್ಚಾಗುತ್ತಿವೆ. ಗಾಳಿ, ನೀರು, ಭೂಮಿ ಕಲುಷಿತಗೊಳ್ಳುತ್ತಿವೆ. ಇದನ್ನು ತಡೆಯಲು ಮಕ್ಕಳಿಗೆ ಬಾಲ್ಯದಿಂದಲೇ ತರಬೇತಿ ನೀಡಬೇಕು’ ಎಂದು ಹೇಳಿದರು.</p>.<p>ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನಾಧಿಕಾರಿ ಬಾಲಕೃಷ್ಣ ಮಾತನಾಡಿದರು. ವಿದ್ಯಾರ್ಥಿಗಳಿಂದ ಗ್ರಾಮದಲ್ಲಿ ಪರಿಸರ ಜಾಗೃತಿ ಜಾಥಾ ನಡೆಯಿತು. ಜನತಾ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೆ.ಜಿ.ಮಂಜುನಾಥ ಸ್ವಾಮಿ, ಮುಖ್ಯ ಶಿಕ್ಷಕರಾದ ಕೆ.ಶಾಂತರಾಜ್, ಹರಿಹರ ಪಟಗಾರ, ಅಧ್ಯಾಪಕ ವರ್ಗ, ಮೇಲ್ವಿಚಾರಕರಾದ ದುರ್ಗಾಭವಾನಿ, ಶಂಭುಲಿಂಗಯ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>