ಹೊನ್ನಾಳಿ: ದಲಿತರ, ಶೋಷಿತರ, ಮಹಿಳೆಯರ, ರೈತರ, ಕಾರ್ಮಿಕರ, ವಿಮೋಚನೆಗಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಡಾ.ಬಿ.ಆರ್.ಅಂಬೇಡ್ಕರ್ ಅವರು ಶಿಕ್ಷಣ, ಸಂಘಟನೆ, ಸ್ವಾಭಿಮಾನದ ಮೂಲಕ ಸಮಸಮಾಜ ನಿರ್ಮಾಣಕ್ಕೆ ಭದ್ರವಾದ ಬುನಾದಿ ಹಾಕಿದರು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಧನಂಜಯ ಅಭಿಪ್ರಾಯಪಟ್ಟರು.