ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ, ಹರಿಹರದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಎಂ. ವಾಗೀಶ ಸ್ವಾಮಿ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ಪಡೆದಿದ್ದು, ಅವರು ಮುಖ್ಯಮಂತ್ರಿ ಜತೆಗೆ ಭಾಗವಹಿಸಬಾರದು ಎಂದು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡುವ ಶಂಕೆ ಇತ್ತು. ಅದಲ್ಲಾಗಿ ಬಿಎಸ್ಪಿ ಮುಖಂಡರಾದ ಎಚ್. ಮಲ್ಲೇಶ್, ಡಿ. ಹನುಮಂತಪ್ಪ ಸಹಿತ ಹಲವರನ್ನು ಪೊಲೀಸರು ವಶಕ್ಕೆ ಪಡೆದರು. ಬಳಿಕ ಎಲ್ಲರನ್ನೂ ಬಿಡುಗಡೆ ಮಾಡಿದರು.