‘ಎಮ್ಮೆ ಬಿದ್ದಿರುವ ಬಗ್ಗೆ ಮಾಹಿತಿ ಸಿಕ್ಕ ತಕ್ಷಣವೇ ಎರಡು ವಾಹನಗಳಲ್ಲಿ ನಾವು 10 ಸಿಬ್ಬಂದಿ 30 ನಿಮಿಷಗಳಲ್ಲಿ ಸ್ಥಳಕ್ಕೆ ಧಾವಿಸಿದ್ದೇವೆ. 80 ಅಡಿ ಆಳದ ಬಾವಿಯಾಗಿದ್ದರಿಂದ ಜೀವಂತವಾಗಿ ಎಮ್ಮೆಯನ್ನು ಹೊರ ತೆಗೆಯುವುದು ಸವಾಲಿನ ಕೆಲಸವಾಗಿತ್ತು. ಸುಬಾನ್, ಆನಂದ ಸೇರಿ ನಮ್ಮ ಸಿಬ್ಬಂದಿ ನಾಲ್ಕು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಪರಿಣಾಮ ಬೆಳಿಗ್ಗೆ 9 ಗಂಟೆ ಹೊತ್ತಿಗೆ ಎಮ್ಮೆಯನ್ನು ಮೇಲಕ್ಕೆ ಎತ್ತಲು ಸಾಧ್ಯವಾಯಿತು’ ಎಂದು ಕಾರ್ಯಾಚರಣೆ ನೇತೃತ್ವ ವಹಿಸಿದ್ದ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಸವಪ್ರಭು ಶರ್ಮಾ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.