<p><strong>ದಾವಣಗೆರೆ</strong>: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರಿಗೆ ಶನಿವಾರ ಮತ್ತೆ ಹೋರಿ ತಿವಿಯಲು ಬಂದಿದೆ. ಬೆಂಬಲಿಗರು ಕೂಡಲೇ ರೇಣುಕಾಚಾರ್ಯ ಅವರನ್ನು ಎಳೆದುಕೊಂಡಿದ್ದರಿಂದ ಅವರು ಬಚಾವಾಗಿದ್ದಾರೆ.</p>.<p>ಹೊನ್ನಾಳಿ ತಾಲ್ಲೂಕು ಕತ್ತಿಗೆ ಗ್ರಾಮದಲ್ಲಿ ಶನಿವಾರ ಹೋರಿ ಬೆದರಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಥಳೀಯ ಶಾಸಕರಾಗಿರುವ ರೇಣುಕಾಚಾರ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆಗ ಹೋರಿ ಹಿಡಿದುಕೊಳ್ಳುವಂತೆ ಸ್ಥಳೀಯರು ಪುಸಲಾಯಿಸಿದ್ದಾರೆ. ರೇಣುಕಾಚಾರ್ಯ ಹಿಡಿದುಕೊಳ್ಳಲು ಹೋಗುತ್ತಿದ್ದಂತೆ ಹೋರಿ ತಿವಿಯಲು ಬಂದಿದೆ.ಅದೇ ಹೊತ್ತಿಗೆ ಬೆಂಬಲಿಗರು ಅವರನ್ನು ಎಳೆದುಕೊಂಡಿದ್ದರಿಂದ ಪಾರಾಗಿದ್ದಾರೆ.</p>.<p><strong>ಇದನ್ನೂ ಓದಿ: <a href="https://www.prajavani.net/stories/stateregional/bull-attacks-on-renukacharya-678444.html" target="_blank">VIDEO| ಶಾಸಕ ರೇಣುಕಾಚಾರ್ಯಗೆ ಹೋರಿ ತಿವಿತ!</a></strong></p>.<p>ಅಕ್ಟೋಬರ್ 31ರಂದು ಹೋರಿ ಬೆಸರಿಸುವ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವೇಳೆ ಹೋರಿ ತಿವಿದಿದ್ದರಿಂದ ರೇಣುಕಾಚಾರ್ಯ ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಈಗ ಮತ್ತೆ ಹೋರಿ ತಿವಿಯಲು ಬಂದಿರುವುದು ಜನರನ್ನು ಚಕಿತಗೊಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರಿಗೆ ಶನಿವಾರ ಮತ್ತೆ ಹೋರಿ ತಿವಿಯಲು ಬಂದಿದೆ. ಬೆಂಬಲಿಗರು ಕೂಡಲೇ ರೇಣುಕಾಚಾರ್ಯ ಅವರನ್ನು ಎಳೆದುಕೊಂಡಿದ್ದರಿಂದ ಅವರು ಬಚಾವಾಗಿದ್ದಾರೆ.</p>.<p>ಹೊನ್ನಾಳಿ ತಾಲ್ಲೂಕು ಕತ್ತಿಗೆ ಗ್ರಾಮದಲ್ಲಿ ಶನಿವಾರ ಹೋರಿ ಬೆದರಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಥಳೀಯ ಶಾಸಕರಾಗಿರುವ ರೇಣುಕಾಚಾರ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆಗ ಹೋರಿ ಹಿಡಿದುಕೊಳ್ಳುವಂತೆ ಸ್ಥಳೀಯರು ಪುಸಲಾಯಿಸಿದ್ದಾರೆ. ರೇಣುಕಾಚಾರ್ಯ ಹಿಡಿದುಕೊಳ್ಳಲು ಹೋಗುತ್ತಿದ್ದಂತೆ ಹೋರಿ ತಿವಿಯಲು ಬಂದಿದೆ.ಅದೇ ಹೊತ್ತಿಗೆ ಬೆಂಬಲಿಗರು ಅವರನ್ನು ಎಳೆದುಕೊಂಡಿದ್ದರಿಂದ ಪಾರಾಗಿದ್ದಾರೆ.</p>.<p><strong>ಇದನ್ನೂ ಓದಿ: <a href="https://www.prajavani.net/stories/stateregional/bull-attacks-on-renukacharya-678444.html" target="_blank">VIDEO| ಶಾಸಕ ರೇಣುಕಾಚಾರ್ಯಗೆ ಹೋರಿ ತಿವಿತ!</a></strong></p>.<p>ಅಕ್ಟೋಬರ್ 31ರಂದು ಹೋರಿ ಬೆಸರಿಸುವ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವೇಳೆ ಹೋರಿ ತಿವಿದಿದ್ದರಿಂದ ರೇಣುಕಾಚಾರ್ಯ ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಈಗ ಮತ್ತೆ ಹೋರಿ ತಿವಿಯಲು ಬಂದಿರುವುದು ಜನರನ್ನು ಚಕಿತಗೊಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>