<p><strong>ಹರಿಹರ</strong>: ಹೊರವಲಯದ ಹರಪನಹಳ್ಳಿ ಹೆದ್ದಾರಿಯ ಕರಲಹಳ್ಳಿ ಕ್ಯಾಂಪ್ ಬಳಿ ಮರಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. </p>.<p>ದಾವಣಗೆರೆ ಘಟಕಕ್ಕೆ ಸೇರಿದ ಬಸ್ ಬೆಳಿಗ್ಗೆ ಹರಿಹರದ ಮೂಲಕ ಹರಪನಹಳ್ಳಿ ಕಡೆಗೆ ಹೊರಟಿದೆ. ವೇಗವಾಗಿ ಸಾಗಿದ್ದ ಬಸ್ ಚಾಲಕನ ನಿಯಂತ್ರಣಕ್ಕೆ ಸಿಗದೇ ಹೆದ್ದಾರಿ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ.</p>.<p>ಡಿಕ್ಕಿಯಾದ ರಭಸಕ್ಕೆ ಬಸ್ಸಿನ ಮುಂಬಾಗ ಅಪ್ಪಚ್ಚಿಯಾಗಿದೆ. ಬಸ್ನಲ್ಲಿ ಸಿಲುಕಿದ್ದ ಚಾಲಕನನ್ನು ಹೊರಕ್ಕೆಳೆಯಲು ಜೆಸಿಬಿ ಸಹಾಯ ಪಡೆಯಬೇಕಾಯಿತು. </p>.<p>ಅಪಘಾತದ ವಿಷಯ ತಿಳಿದು ಸುತ್ತಲಿನ ಗ್ರಾಮಸ್ಥರು ಹಾಗೂ ರಸ್ತೆಯಲ್ಲಿ ಸಾಗುತ್ತಿದ್ದ ಜನರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಿದರು. </p>.<p>ಬಸ್ಸಿನಲ್ಲಿ 25 ಜನ ಪ್ರಯಾಣಿಕರಿದ್ದರು. ಚಾಲಕ ಮತ್ತು ನಿರ್ವಾಹಕ ಸೇರಿದಂತೆ ಕೆಲವು ಪ್ರಯಾಣಿಕರಿಗೆ ಕೈ, ಕಾಲು, ತಲೆಗೆ ತೀವ್ರ ಪೆಟ್ಟಾಗಿದೆ. ಉಳಿದವರಿಗೆ ಸಣ್ಣ, ಪುಟ್ಟ ಪೆಟ್ಟಾಗಿವೆ. </p>.<p>ಗಾಯಾಳುಗಳು: ಚಾಲಕ ರವೀಂದ್ರ, ನಿರ್ವಾಹಕ ರಾಮಲಿಂಗಪ್ಪ ಕುಂಬಾರ್, ಪ್ರಯಾಣಿಕರಾದ ಅರುಣಪ್ಪ, ಚಂದ್ರನಾಯ್ಕ, ಮುಬಾರಕ್, ದಸ್ತಗೀರ್, ಲೋಕೇಶ್, ವಿನೂತಾ, ಸಮನ್ವಿತ ಸೇರಿದಂತೆ ಇನ್ನಿತರ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ</strong>: ಹೊರವಲಯದ ಹರಪನಹಳ್ಳಿ ಹೆದ್ದಾರಿಯ ಕರಲಹಳ್ಳಿ ಕ್ಯಾಂಪ್ ಬಳಿ ಮರಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. </p>.<p>ದಾವಣಗೆರೆ ಘಟಕಕ್ಕೆ ಸೇರಿದ ಬಸ್ ಬೆಳಿಗ್ಗೆ ಹರಿಹರದ ಮೂಲಕ ಹರಪನಹಳ್ಳಿ ಕಡೆಗೆ ಹೊರಟಿದೆ. ವೇಗವಾಗಿ ಸಾಗಿದ್ದ ಬಸ್ ಚಾಲಕನ ನಿಯಂತ್ರಣಕ್ಕೆ ಸಿಗದೇ ಹೆದ್ದಾರಿ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ.</p>.<p>ಡಿಕ್ಕಿಯಾದ ರಭಸಕ್ಕೆ ಬಸ್ಸಿನ ಮುಂಬಾಗ ಅಪ್ಪಚ್ಚಿಯಾಗಿದೆ. ಬಸ್ನಲ್ಲಿ ಸಿಲುಕಿದ್ದ ಚಾಲಕನನ್ನು ಹೊರಕ್ಕೆಳೆಯಲು ಜೆಸಿಬಿ ಸಹಾಯ ಪಡೆಯಬೇಕಾಯಿತು. </p>.<p>ಅಪಘಾತದ ವಿಷಯ ತಿಳಿದು ಸುತ್ತಲಿನ ಗ್ರಾಮಸ್ಥರು ಹಾಗೂ ರಸ್ತೆಯಲ್ಲಿ ಸಾಗುತ್ತಿದ್ದ ಜನರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಿದರು. </p>.<p>ಬಸ್ಸಿನಲ್ಲಿ 25 ಜನ ಪ್ರಯಾಣಿಕರಿದ್ದರು. ಚಾಲಕ ಮತ್ತು ನಿರ್ವಾಹಕ ಸೇರಿದಂತೆ ಕೆಲವು ಪ್ರಯಾಣಿಕರಿಗೆ ಕೈ, ಕಾಲು, ತಲೆಗೆ ತೀವ್ರ ಪೆಟ್ಟಾಗಿದೆ. ಉಳಿದವರಿಗೆ ಸಣ್ಣ, ಪುಟ್ಟ ಪೆಟ್ಟಾಗಿವೆ. </p>.<p>ಗಾಯಾಳುಗಳು: ಚಾಲಕ ರವೀಂದ್ರ, ನಿರ್ವಾಹಕ ರಾಮಲಿಂಗಪ್ಪ ಕುಂಬಾರ್, ಪ್ರಯಾಣಿಕರಾದ ಅರುಣಪ್ಪ, ಚಂದ್ರನಾಯ್ಕ, ಮುಬಾರಕ್, ದಸ್ತಗೀರ್, ಲೋಕೇಶ್, ವಿನೂತಾ, ಸಮನ್ವಿತ ಸೇರಿದಂತೆ ಇನ್ನಿತರ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>