ಗುರುವಾರ , ಮಾರ್ಚ್ 23, 2023
29 °C

ಬಸ್ ಪ್ರಯಾಣ ದರ ಹೆಚ್ಚಳ ವಿರೋಧಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಹೆಚ್ಚಿಸಿರುವುದನ್ನು ಖಂಡಿಸಿ ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್ ) ಜಿಲ್ಲಾ ಘಟಕದಿಂದ ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು.

ಸಂಘನೆಯ ಜಿಲ್ಲಾ ಕಾರ್ಯದರ್ಶಿ ಮಜುನಾಥ್ ಕೈದಾಳೆ ಮಾತನಾಡಿ, ‘ಕೋವಿಡ್‌ನಿಂದಾಗಿ ಜನಜೀವನ ದುಸ್ತರವಾಗಿರುವ ಇಂದಿನ ದಿನಗಳಲ್ಲಿ ಆಡಳಿತ ಪಕ್ಷಗಳು ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸದೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಗಾಯದ ಮೇಲೆ ಬರೆ ಎಳೆದಿದೆ. ಇಷ್ಟು ಸಾಲದೆಂಬಂತೆ ಬಸ್ ಪ್ರಯಾಣ ದರ ಹೆಚ್ಚಿಸಿರುವುದು ಅಕ್ಷಮ್ಯ’ ಎಂದು ಆರೋಪಿಸಿದರು.

‘ಕೆಎಸ್‌ಆರ್‌ಟಿಸಿ ಸೇವಾ ವಲಯವಾಗಿದ್ದು, ಜನಸಾಮಾನ್ಯರಿಗೆ ಉಚಿತ ಸೇವೆಯನ್ನು ನೀಡಬೇಕಿತ್ತು. ಆದರೆ ಸಂಸ್ಥೆ ಹಾಗೂ ಸರ್ಕಾರವು ಲಾಭ-ನಷ್ಟದ ಲೆಕ್ಕಾಚಾರದಲ್ಲಿ, ಡೀಸೆಲ್ ದರ ಹೆಚ್ಚಳದ ನೆಪ ಹೇಳಿ ಪ್ರಯಾಣ ದರ ಹೆಚ್ಚಿಸಿರುವುದು ಜನರಿಗೆ ಮಾಡಿದ ದ್ರೋಹವಾಗಿದೆ. ಕೂಡಲೇ ಪ್ರಯಾಣ ದರವನ್ನು ಹಿಂಪಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ಅನಿವಾರ್ಯ’ ಎಂದು ಹೇಳಿದರು.

ಬಸ್ ಪ್ರಯಾಣ ದರವನ್ನು ಕೂಡಲೇ ಹಿಂಪಡೆಯಬೇಕು. ನಗರದಿಂದ ಎಲ್ಲಾ ತಾಲ್ಲೂಕು ಕೇಂದ್ರಗಳಿಗೆ ಹಾಗೂ ಗ್ರಾಮೀಣ ಭಾಗಗಳಿಗೆ ಹೆಚ್ಚಿನ ಬಸ್ ಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಡಿಟಿಒ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಸುನೀತ್ ಕುಮಾರ್, ಮಂಜುನಾಥ್ ಕುಕ್ಕುವಾಡ, ತಿಪ್ಪೇಸ್ವಾಮಿ ಅಣಬೇರು, ಮಧು ತೊಗಲೇರಿ, ಭಾರತಿ, ಪರಶುರಾಮ್, ನಾಗಜ್ಯೋತಿ, ಪೂಜಾ, ಕಾವ್ಯಾ, ನಾಗಸ್ಮಿತಾ, ಪುಷ್ಪಾ, ಗುರು, ಮಮತಾ, ಅನಿಲ್, ಬಸವರಾಜ್ ಬಾವಿಹಾಳ್, ಲಕ್ಷ್ಮಣ್ ಮಾಯಕೊಂಡ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.