ಕೆಎಸ್ಆರ್ಟಿಸಿ ಎದುರಿನ ಮಾರುಕಟ್ಟೆ, ಕೆ.ಆರ್. ಮಾರುಕಟ್ಟೆ, ಹೈಸ್ಕೂಲ್ ಮೈದಾನ, ಎಪಿಎಂಸಿ ಮಾರುಕಟ್ಟೆ, ಪ್ರವಾಸಿ ಮಂದಿರ ರಸ್ತೆ, ನಿಜಲಿಂಗಪ್ಪ ವೃತ್ತ, ಪಿ.ಬಿ.ರಸ್ತೆ, ಶಾಮನೂರು ರಸ್ತೆ, ಚಿಗಟೇರಿ ಆಸ್ಪತ್ರೆ ಸೇರಿ ಹಲವೆಡೆ ಬಾಳೆ ಕಂದು, ಬೂದುಗುಂಬಳಕಾಯಿಗಳ ಖರೀದಿ ಭರಾಟೆ ಕಂಡು ಬಂತು. ಪ್ರಮುಖ ರಸ್ತೆಗಳಲ್ಲಿ ಆಲಂಕಾರಿಕ ವಸ್ತುಗಳು, ಪೂಜೆ ಸಾಮಗ್ರಿಗಳಿಗೆ ಪ್ರತ್ಯೇಕವಾಗಿ ಅಂಗಡಿಗಳನ್ನು ತೆರೆಯಲಾಗಿತ್ತು.