<p><strong>ದಾವಣಗೆರೆ</strong>: ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಎದುರಾಗಿರುವ ಉಪಚುನಾವಣೆಯ ಸಂಪೂರ್ಣ ಹೊಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ನೀಡುವಂತೆ ಕಾಂಗ್ರೆಸ್ ಜಿಲ್ಲಾ ಘಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಒತ್ತಾಯಿಸಿದೆ.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರೂ ಆಗಿರುವ ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಬಿ. ಮಂಜಪ್ಪ ನೇತೃತ್ವದಲ್ಲಿ 2,000ಕ್ಕೂ ಹೆಚ್ಚು ಜನರು ಬೆಂಗಳೂರಿಗೆ ತೆರಳಿ ಇಬ್ಬರು ನಾಯಕರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಅಭ್ಯರ್ಥಿ ಘೋಷಣೆಯ ವಿಚಾರದಲ್ಲಿ ಸೃಷ್ಟಿಯಾಗಿರುವ ಗೊಂದಲಗಳಿಗೆ ತೆರೆ ಎಳೆಯಬೇಕು ಹಾಗೂ ಅನಗತ್ಯ ಹೇಳಿಕೆ ನೀಡುವುದಕ್ಕೆ ಕಡಿವಾಣ ಹಾಕಬೇಕು ಎಂದು ಮನವಿ ಮಾಡಿದ್ದಾರೆ.</p>.<p>‘ಸಚಿವ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಉತ್ತಮವಾಗಿದೆ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಎದುರಾಗಿರುವ ಉಪಚುನಾವಣೆ ಗೆಲ್ಲುವ ಸವಾಲು ಪಕ್ಷದ ಮುಂದಿದೆ. ಚುನಾವಣೆಯ ಸಂಪೂರ್ಣ ಹೊಣೆಯನ್ನು ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ನೀಡಿದರೆ ಕ್ಷೇತ್ರದ ಗೆಲುವು ಸುಲಭವಾಗಲಿದೆ’ ಎಂದು ಕೋರಿಕೊಂಡಿದ್ದಾರೆ.</p>.<p>ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡುವಂತೆ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಸೇರಿ ಅನೇಕರು ಪಟ್ಟುಹಿಡಿದಿದ್ದಾರೆ. ‘ಮುಂದಿನ ಚುನಾವಣೆಯಲ್ಲಿ ಮುಸ್ಲಿಮರಿಗೆ ಅವಕಾಶ ಕಲ್ಪಿಸುವುದಾಗಿ 2023ರಲ್ಲಿ ಶಾಮನೂರು ಶಿವಶಂಕರಪ್ಪ ಆಶ್ವಾಸನೆ ನೀಡಿದ್ದರು’ ಎಂಬುದಾಗಿ ವಸತಿ ಸಚಿವ ಜಮೀರ್ ಅಹಮ್ಮದ್ ನೀಡಿದ ಹೇಳಿಕೆ ಸಚಿವ ಮಲ್ಲಿಕಾರ್ಜುನ್ ಅವರನ್ನು ಕೆರಳಿಸಿತ್ತು. ಇದಕ್ಕೆ ಮಲ್ಲಿಕಾರ್ಜುನ್ ಖಾರವಾಗಿ ಪ್ರತಿಕ್ರಿಯಿಸಿದ್ದರು.</p>.<p>‘ಜಮೀರ್ ಅಹಮ್ಮದ್ ಹಾಗೂ ಅಬ್ದುಲ್ ಜಬ್ಬಾರ್ ಅವರು ನೀಡಿದ ಬಹಿರಂಗ ಹೇಳಿಕೆಗಳಿಂದ ಕ್ಷೇತ್ರದಲ್ಲಿ ಗೊಂದಲ ಸೃಷ್ಟಿಯಾಗಿದೆ. ಚುನಾವಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಕುರಿತು ಪಕ್ಷದ ನಾಯಕರಿಗೆ ಮನವರಿಕೆ ಮಾಡಿಕೊಡಲಾಗಿದೆ’ ಎಂದು ಮುಖಂಡರೊಬ್ಬರು ಮಾಹಿತಿ ನೀಡಿದರು.</p>.<p>‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಮಾಜಿ ಮೇಯರ್ ಚಮನ್ ಸಾಬ್, ಮುಖಂಡರಾದ ಅಯೂಬ್ ಪೈಲ್ವಾನ್, ಎ.ನಾಗರಾಜ್, ಮುದೇಗೌಡರ ಗಿರೀಶ್, ಜಿ.ಸಿ. ನಿಂಗಪ್ಪ ನಿಯೋಗದಲ್ಲಿದ್ದರು.</p>.<p><strong>24ರಂದು ಬೆಂಗಳೂರಿನಲ್ಲಿ ಸಭೆ</strong></p><p>‘ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕುರಿತು ಚರ್ಚಿಸಲು ಪಕ್ಷದ ನಾಯಕರು ಹಾಗೂ ಜಿಲ್ಲೆಯ ಎಲ್ಲ ಮಂಚೂಣಿ ಘಟಕಗಳ ಅಧ್ಯಕ್ಷರ ಸಭೆಯನ್ನು ಮಾರ್ಚ್ 24ರಂದು ಕೆಪಿಸಿಸಿ ಕಚೇರಿಯಲ್ಲಿ ಕರೆಯಲು ತೀರ್ಮಾನಿಸಲಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ತಿಳಿಸಿದರು.</p><p>ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿರ್ದೇಶನದ ಮೇರೆಗೆ ಉಪಚುನಾವಣೆಗೆ ಸಂಬಂಧಿಸಿದ ಸಮನ್ವಯ ಸಮಿತಿ ರಚನೆಯಾಗಿದೆ. ಸಮಿತಿಯ ಸಭೆ ನಡೆದಿದ್ದು ಉಪಚುನಾವಣೆ ಎದುರಿಸುವ ಕುರಿತು ಚರ್ಚಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p><p>‘ಅಭ್ಯರ್ಥಿ ಆಯ್ಕೆ ವಿಚಾರವಾಗಿ ಹೇಳಿಕೆ ನೀಡಿ ಗೊಂದಲ ಸೃಷ್ಟಿಸಬಾರದು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷರು ತಾಕೀತು ಮಾಡಿದ್ದಾರೆ. ಪಕ್ಷದ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧರಾಗಿ ಇರುವುದಾಗಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಜಮೀರ್ ಅಹಮ್ಮದ್ ವಾಗ್ದಾನ ನೀಡಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಎದುರಾಗಿರುವ ಉಪಚುನಾವಣೆಯ ಸಂಪೂರ್ಣ ಹೊಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ನೀಡುವಂತೆ ಕಾಂಗ್ರೆಸ್ ಜಿಲ್ಲಾ ಘಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಒತ್ತಾಯಿಸಿದೆ.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರೂ ಆಗಿರುವ ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಬಿ. ಮಂಜಪ್ಪ ನೇತೃತ್ವದಲ್ಲಿ 2,000ಕ್ಕೂ ಹೆಚ್ಚು ಜನರು ಬೆಂಗಳೂರಿಗೆ ತೆರಳಿ ಇಬ್ಬರು ನಾಯಕರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಅಭ್ಯರ್ಥಿ ಘೋಷಣೆಯ ವಿಚಾರದಲ್ಲಿ ಸೃಷ್ಟಿಯಾಗಿರುವ ಗೊಂದಲಗಳಿಗೆ ತೆರೆ ಎಳೆಯಬೇಕು ಹಾಗೂ ಅನಗತ್ಯ ಹೇಳಿಕೆ ನೀಡುವುದಕ್ಕೆ ಕಡಿವಾಣ ಹಾಕಬೇಕು ಎಂದು ಮನವಿ ಮಾಡಿದ್ದಾರೆ.</p>.<p>‘ಸಚಿವ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಉತ್ತಮವಾಗಿದೆ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಎದುರಾಗಿರುವ ಉಪಚುನಾವಣೆ ಗೆಲ್ಲುವ ಸವಾಲು ಪಕ್ಷದ ಮುಂದಿದೆ. ಚುನಾವಣೆಯ ಸಂಪೂರ್ಣ ಹೊಣೆಯನ್ನು ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ನೀಡಿದರೆ ಕ್ಷೇತ್ರದ ಗೆಲುವು ಸುಲಭವಾಗಲಿದೆ’ ಎಂದು ಕೋರಿಕೊಂಡಿದ್ದಾರೆ.</p>.<p>ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡುವಂತೆ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಸೇರಿ ಅನೇಕರು ಪಟ್ಟುಹಿಡಿದಿದ್ದಾರೆ. ‘ಮುಂದಿನ ಚುನಾವಣೆಯಲ್ಲಿ ಮುಸ್ಲಿಮರಿಗೆ ಅವಕಾಶ ಕಲ್ಪಿಸುವುದಾಗಿ 2023ರಲ್ಲಿ ಶಾಮನೂರು ಶಿವಶಂಕರಪ್ಪ ಆಶ್ವಾಸನೆ ನೀಡಿದ್ದರು’ ಎಂಬುದಾಗಿ ವಸತಿ ಸಚಿವ ಜಮೀರ್ ಅಹಮ್ಮದ್ ನೀಡಿದ ಹೇಳಿಕೆ ಸಚಿವ ಮಲ್ಲಿಕಾರ್ಜುನ್ ಅವರನ್ನು ಕೆರಳಿಸಿತ್ತು. ಇದಕ್ಕೆ ಮಲ್ಲಿಕಾರ್ಜುನ್ ಖಾರವಾಗಿ ಪ್ರತಿಕ್ರಿಯಿಸಿದ್ದರು.</p>.<p>‘ಜಮೀರ್ ಅಹಮ್ಮದ್ ಹಾಗೂ ಅಬ್ದುಲ್ ಜಬ್ಬಾರ್ ಅವರು ನೀಡಿದ ಬಹಿರಂಗ ಹೇಳಿಕೆಗಳಿಂದ ಕ್ಷೇತ್ರದಲ್ಲಿ ಗೊಂದಲ ಸೃಷ್ಟಿಯಾಗಿದೆ. ಚುನಾವಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಕುರಿತು ಪಕ್ಷದ ನಾಯಕರಿಗೆ ಮನವರಿಕೆ ಮಾಡಿಕೊಡಲಾಗಿದೆ’ ಎಂದು ಮುಖಂಡರೊಬ್ಬರು ಮಾಹಿತಿ ನೀಡಿದರು.</p>.<p>‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಮಾಜಿ ಮೇಯರ್ ಚಮನ್ ಸಾಬ್, ಮುಖಂಡರಾದ ಅಯೂಬ್ ಪೈಲ್ವಾನ್, ಎ.ನಾಗರಾಜ್, ಮುದೇಗೌಡರ ಗಿರೀಶ್, ಜಿ.ಸಿ. ನಿಂಗಪ್ಪ ನಿಯೋಗದಲ್ಲಿದ್ದರು.</p>.<p><strong>24ರಂದು ಬೆಂಗಳೂರಿನಲ್ಲಿ ಸಭೆ</strong></p><p>‘ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕುರಿತು ಚರ್ಚಿಸಲು ಪಕ್ಷದ ನಾಯಕರು ಹಾಗೂ ಜಿಲ್ಲೆಯ ಎಲ್ಲ ಮಂಚೂಣಿ ಘಟಕಗಳ ಅಧ್ಯಕ್ಷರ ಸಭೆಯನ್ನು ಮಾರ್ಚ್ 24ರಂದು ಕೆಪಿಸಿಸಿ ಕಚೇರಿಯಲ್ಲಿ ಕರೆಯಲು ತೀರ್ಮಾನಿಸಲಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ತಿಳಿಸಿದರು.</p><p>ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿರ್ದೇಶನದ ಮೇರೆಗೆ ಉಪಚುನಾವಣೆಗೆ ಸಂಬಂಧಿಸಿದ ಸಮನ್ವಯ ಸಮಿತಿ ರಚನೆಯಾಗಿದೆ. ಸಮಿತಿಯ ಸಭೆ ನಡೆದಿದ್ದು ಉಪಚುನಾವಣೆ ಎದುರಿಸುವ ಕುರಿತು ಚರ್ಚಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p><p>‘ಅಭ್ಯರ್ಥಿ ಆಯ್ಕೆ ವಿಚಾರವಾಗಿ ಹೇಳಿಕೆ ನೀಡಿ ಗೊಂದಲ ಸೃಷ್ಟಿಸಬಾರದು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷರು ತಾಕೀತು ಮಾಡಿದ್ದಾರೆ. ಪಕ್ಷದ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧರಾಗಿ ಇರುವುದಾಗಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಜಮೀರ್ ಅಹಮ್ಮದ್ ವಾಗ್ದಾನ ನೀಡಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>