‘ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳ ಆವರಣದಲ್ಲಿ ಅನ್ಯಮತೀಯರು ವ್ಯಾಪಾರ- ವಹಿವಾಟು ನಡೆಸುವಂತಿಲ್ಲ ಎಂಬುದು ಸರ್ಕಾರದ ನಿಯಮವಾಗಿದೆ. ಅದನ್ನು ಅನುಷ್ಠಾನಗೊಳಿಸುವುದರಲ್ಲಿ ತಪ್ಪೇನಿಲ್ಲ. ಆದರೆ, ಅಂತಹ ಪರಿಸ್ಥಿತಿ ತಂದುಕೊಂಡಿದ್ದು ಯಾರು ಎಂಬುದರ ಬಗ್ಗೆಯೂ ಚರ್ಚೆಯಾಗಬೇಕು. ಅದೇ ರೀತಿ ಲವ್ ಜಿಹಾದ್, ಮತಾಂತರ ತಡೆಗೂ ಕಾನೂನು ಇದೆ. ಅದನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕಾದದ್ದು ಸರ್ಕಾರದ ಕೆಲಸ. ಸಮಾಜಕ್ಕೆ ಯಾವುದೇ ರೀತಿಯ ಹಾನಿ ಆಗಬಾರದು. ಯಾವುದೇ ಸಮಾಜಕ್ಕೆ ಅನ್ಯಾಯವಾದರೆ ಸಹಿಸಿಕೊಂಡಿರಬೇಕು ಎಂಬುದೂ ಸರಿಯಲ್ಲ’ ಎಂದು ಅವರು ಹೇಳಿದರು.