ಸಿದ್ದರಾಮಯ್ಯ ಅವರನ್ನು ಪಮರೇನಿಯನ್ ನಾಯಿ ಅನ್ನಲು ಆಗುತ್ತದೆಯೇ? ಕಟೀಲ್

ದಾವಣಗೆರೆ: ‘ಸೋನಿಯಾ ಗಾಂಧಿ ಮುಂದೆ ಕೈಕಟ್ಟಿ ಕುಳಿತುಕೊಳ್ಳುತ್ತಿದ್ದ ಸಿದ್ದರಾಮಯ್ಯ ಅವರನ್ನು ಪಮರೇನಿಯನ್ ನಾಯಿ ಅನ್ನೋಕೆ ಆಗುತ್ತಾ’ ಎಂದು ನಳಿನ್ಕುಮಾರ್ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲು ಪ್ರಶ್ನಿಸಿದರು.
ಬಿಜೆಪಿಯಿಂದ ಶುಕ್ರವಾರ ನಡೆದ ವೃತ್ತಿಪರರು ಮತ್ತು ಕೀ ವೋಟರ್ಸ್ ಸಮಾವೇಶದ ಬಳಿಕ ಮಾತನಾಡಿದ ಅವರು, ‘ಸಮಾಜವಾದಿ ಚಿಂತಕರು ಬಾಲಿಶ ಹೇಳಿಕೆ ನೀಡುವ ಮೂಲಕ ರಾಜಕೀಯಕ್ಕೆ ಹಾಗೂ ಮುಖ್ಯಮಂತ್ರಿಗೆ ಅಪಮಾನ ಮಾಡಿದ್ದಾರೆ. ಹಿಂದೂ ಸಮಾಜವನ್ನು ಅವಮಾನ ಮಾಡಿರುವುದು ಅವರ ಬೌದ್ಧಿಕ ದಿವಾಳಿತನ ತೋರಿಸುತ್ತದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.
‘ಸಿದ್ದರಾಮಯ್ಯ ಅವರಿಗೆ ಮಾನಸಿಕ ಸಮಸ್ಯೆಗಳು ಶುರುವಾಗಿವೆ. ಸನಾತನ ಧರ್ಮ ಭಾರತೀಯರ ಪ್ರತೀಕವಾಗಿದೆ’ ಎಂದು ಹೇಳಿದರು.
‘ಇಡೀ ರಾಜ್ಯವನ್ನೇ ಶಾಪಿಂಗ್ ಮಾಲ್ ಮಾಡಿದ್ದು, ಭ್ರಷ್ಟಾಚಾರ, ಕಮಿಷನ್ ಏಜೆಂಟ್ಗಿರಿ ತಂದಿದ್ದು ಕಾಂಗ್ರೆಸ್’ ಎಂದು ಲೇವಡಿ ನಳಿನ್ಕುಮಾರ್ ಟೀಕಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.