ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಯಾಣ ಮಂಟಪದಲ್ಲಿ ಕಳವು ಮಾಡುತ್ತಿದ್ದವನ ಸೆರೆ

Last Updated 10 ನವೆಂಬರ್ 2019, 11:04 IST
ಅಕ್ಷರ ಗಾತ್ರ

ದಾವಣಗೆರೆ: ಕಲ್ಯಾಣ ಮಂಟಪಗಳಿಗೆ ತೆರಳಿ ಕಳವು ಮಾಡುತ್ತಿದ್ದ ಆರೋಪಿಯನ್ನು ಸೆಂಟ್ರಲ್‌ ಸರ್ಕಲ್‌ ಇನ್‌ಸ್ಪೆಕ್ಟರ್‌ ತಿಮ್ಮಣ್ಣ ಅವರ ನೇತೃತ್ವದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಶಾಂತಿನಗರ ಕಿರಣ್‌ ನಾಯ್ಕ್‌ (23) ಬಂಧಿತ ಆರೋಪಿ. ಬಕ್ಕೇಶ ಕಲ್ಯಾಣ ಮಂಟಪ, ಬಾಪೂಜಿ ಸಭಾಭವನ ಸೇರಿದಂತೆ ನಗರದಲ್ಲಿ ಕಲ್ಯಾಣ ಮಂಟಪಗಳಲ್ಲಿ ಮದುವೆ ನಡೆಯುವಲ್ಲಿಗೆ ಈತ ಹೋಗುತ್ತಿದ್ದ. ಹೆಣ್ಣುಮಕ್ಕಳು ಬೇರೆ ಕೆಲಸಗಳಲ್ಲಿ ತೊಡಗಿರುವ ಹೊತ್ತಿಗೆ ಯಾವುದಾರೂ ಬ್ಯಾಗ್‌ ತೆಗೆದುಕೊಂಡು ಪರಾರಿಯಾಗುತ್ತಿದ್ದ. ಈತನಿಂದ ಎರಡು ಮೊಬೈಲ್‌, ಚಿನ್ನ, ನಗದು ಸೇರಿ ಒಟ್ಟು ₹ 3.4 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT